ಕಲಬುರಗಿ: ಮೋದಲನೆಯದಾಗಿ ಓಡಾಡುವ ಕೆಲಸ ಮಾಡುವ ಹಾಗೂ ದುಡಿಯುವ ಪ್ರಾಯದ ಎಲ್ಲರಿಗೂ ಲಸಿಕೆ ಕೊಡುವ ಹಾಗೆ ಯೋಜನೆಯನ್ನು ರೂಪಿಸಿದ್ದರೆ ಲಸಿಕೆ ಅಭಿಯಾನ ಯಶ್ವಸಿ ಆಗುತ್ತಿತ್ತು. ಕೊರೊನಾ ಸೊಂಕು ಕೂಡಾ ಹರಡುತ್ತಿರಲಿಲ್ಲ. ನಂತರ ಹಿರಿಯ ನಾಗರಿಕರಿಗೂ ಮಕ್ಕಳಿಗೂ ನೀಡಬಹುದಿತ್ತು. ಈಗ ದುಡಿಮೆಯು ಇಲ್ಲ , ಲಸಿಕೆಯು ಇಲ್ಲ ಎಂಬತಾಗಿದೆ. ಕೂಡಲೇ ಸರಕಾರ ಲಸಿಕೆ ವಿತರಣೆಯನ್ನು ಸಮಾರೋಪಾದಿಯಲ್ಲಿ ಜರುಗಿಸಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಎಸ್ ಸರಡಗಿ ಅವರು ಸರಕಾರಕ್ಕೆ ಮನವಿ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಲಸಿಕೆ ಕೇಂದ್ರಕ್ಕೆ ಹೋದಾಗ ಇಂದು ಬಾ ನಾಳೆ ಬಾ ಎಂದು ಸಾಗಹಾಕುತ್ತಿದ್ದಾರೆ. ರಾಜ್ಯದಲ್ಲಂತೂ ಪಿಲ್ಲೂ ಲಸಿಕೆ ಸ್ಟಾಕ್ ಇಲ್ಲ ಎಂದು ಹೇಳುತ್ತಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ಲಸಿಕೆ ಸಿಗುತ್ತಿಲ್ಲ. ಹದಿನೆಂಟು ವ? ಮೇಲ್ಪಟ್ಟವರಿಗೆ ಲಸಿಕೆ ಹಾಕಿಸುವುದನ್ನೇ ನಿಲ್ಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ೪೫ ವ? ಮೇಲ್ಪಟ್ಟವರಿಗೂ ಎರಡನೇ ಡೋಸ್ ಗೆ ಹೋದರೆ ಸತಾಯಿಸುತ್ತಿದ್ದಾರೆ ಎಂದು ಹೇಳಿದರು.
ಟಿವಿ, ರೇಡಿಯೋ ಮತ್ತಿತರ ಮಾಧ್ಯಮಗಳಲ್ಲಿ ಸರಕಾರ ’ಕೂಡಲೇ ಲಸಿಕೆ ಹಾಕಿಸಿ’ ಎಂದು ಜಾಹೀರಾತುಗಳನ್ನು ನೀಡುತ್ತಿದೆ ಸೆಲೆಬ್ರಿಟಿಗಳು ಲಸಿಕೆ ಹಾಕಿಸಲು ಪ್ರಜೆಗಳನ್ನು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…