ವಾಡಿ: ಸಮೀಪದ ಲಾಡ್ಲಾಪುರ ಗ್ರಾಮ ನಿವಾಸಿ, ಬಟ್ಟೆ ವ್ಯಾಪಾರಿ ಹಾವಣ್ಣ ಕುಂಬಾರ (50) ಮಹಾಮಾರಿ ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಇದ್ದಾರೆ.
ಕೋವಿಡ್ ಸೊಂಕು ದೃಢಪಟ್ಟು ಕಳೆದ 15 ದಿನಗಳಿಂದ ಕಲಬುರಗಿ ಕೆಬಿಎನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ತೀವ್ರ ಉಸಿರಾಟ ತೊಂದರೆ ಹಾಗೂ ಕರಳು ಬೇನೆ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ ಆಕ್ಸಿಜನ್ ಚಿಕಿತ್ಸೆ ಮುಂದುವರೆಸಲಾಗಿತ್ತು. ಚೇತರಿಸಿಕೊಳ್ಳಾಗದೆ ರೋಗಿಯ ಆರೋಗ್ಯ ದಿನೇದಿನೆ ಹದಗೆಡುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.
ಬುಧವಾರ ಸಂಜೆಯೇ ಲಾಡ್ಲಾಪುರ ಗ್ರಾಮದಲ್ಲಿ ಅಂತ್ಯಕ್ರೀಯೆ ನೆರವೇರಿಸಲಾಯಿತು ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ. ಲಾಡ್ಲಾಪುರ ಗ್ರಾಮದಲ್ಲಿ ಕೋವಿಡ್ಗೆ ಇದು ಎರಡನೇ ಸಾವು ಎನ್ನಲಾಗಿದೆ.