ಕಲಬುರಿಗ; ’ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ. ಸಮಾಜ ಸೇವೆ ಒಂದು ಪುಣ್ಯದ ಕೆಲಸವಾಗಿದೆ. ತಮ್ಮ ಕೆಲಸದಲ್ಲಿ ಯಾರು ಅಪ್ರಾಮಾಣಿಕತೆಯಿಂದ ಇರುತ್ತಾರೆ ಅವರು ಎ? ಹಣ ಗಳಿಸಿದರೂ ಅವರಿಗೆ ನೆಮ್ಮದಿ ಬದುಕು ಇರುವುದಿಲ್ಲ. ಮನು? ಇಂದು ಕೇವಲ ಹಣ ಗಳಿಕೆಗೆ ಮಾತ್ರ ಸೀಮಿತನಾಗಿರುವುದರ ಜತೆಗೆ ಸ್ವಾರ್ಥಿಗಳಾಗಿದ್ದಾರೆ. ಕೇವಲ ತಾವು ಹಾಗೂ ತಮ್ಮ ಕುಟುಂಬ ಕಷ್ಠೆ ಸೀಮಿತರಾಗಿದ್ದು, ಸಮಾಜದ ಅಭಿವೃದ್ಧಿಗೆ ಹಣವುಳ್ಳವರು ಶ್ರಮಿಸುತ್ತಿರುವುದು ವಿರಳವಾಗಿದೆ. ಯಾರನ್ನಾದರೂ ಬೆಟ್ಟು ಮಾಡುವ ಬದಲು ಅವರಿಗೆ ಅವಕಾಶ ನೀಡುವ ಮೂಲಕ ಸಮಾಜಮುಖಿ ಕೆಲಸ ಮಾಡಬೇಕು. ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಂಕಲ್ಪ ತೊಟ್ಟರೆ ಮಾತ್ರ ಸಮಾಜದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಮಾಜ ಸೇವಕಿ ಅವರು ತಮ್ಮ ಮನದಾಳದ ಮಾತನ್ನು ಸಮಾಜ ಸೇವಕಿ ಮಹೇಶ್ವರಿ ವಾಲಿ ಅವರು ಹೇಳಿದರು.
ಕೋವಿಡ್-೧೯ ೨ನೇ ಅಲೆಯಲ್ಲಿ ಸುಮಾರು ೨೫೦ ಬಡ ನಿರ್ಗತಿಕರಿಗೆ ಪ್ರತಿ ದಿನ ಅನ್ನ ಸಂತರ್ಪಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರತಿ ದಿನ ಬಡ ನಿರ್ಗತಿಕರ ಮನೆಗಳಿಗೆ ಗುಡಿಸಲುಗಳಿಗೆ ತೆರಳಿ ಅನ್ನ ಸಂಪರ್ತಣೆ ಮಾಡಿ ಅವರೊಂದಿಗೆ ತಾವು ಊಟವನ್ನು ಮಾಡುವಂತಹ ಮಹಾನ ದಯಾಳುಗಳು ಎಂದು ಗುಡಿಸಲಿನಲ್ಲಿ ವಾಸಿಸುವಂತಹ ಬಡ ನಿರ್ಗತಿಕರು ಹೇಳಿದರುವಂತಹ ಮಾತಾಗಿದೆ.
ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಬಡ ಕುಟುಂಬಗಳಿಗೆ ಆಹಾರದ ಕಿಟ್ಟ್, ಬಟ್ಟೆಗಳು, ಹಾಗೂ ಗುಡಿಸಲುಗಳಿಗೆ ತೆರಳಿ ಅಲ್ಲಿ ವಾಸಿಸುವ ಕುಟುಂಬಗಳಿಗೂ ಆಹಾರದ ಕಿಟ್ಟ್, ಹಾಗೂ ಬಟ್ಟೆಗಳನ್ನು ವಿತರಿಸುತ್ತ ಸಮಾಜ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಅದೇ ರೀತಿಯಾಗಿ ನಗರದಲ್ಲಿ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ತರಳಿ ಅನ್ನ ಸಂತರ್ಪಣೆ ಆಹಾರದ ಕಿಟ್ಟ್ಗಳನ್ನು ವಿತರಿಸಿ ಅವರುಗಳ ಜೊತೆಗೂಡಿಕೊಂಡು ಅವರುಗಳಿಗೆ ಊಟವನ್ನು ಬಡಿಸಿ ಅವರುಗಳ ಜೊತೆ ತಾವು ಕುಳಿತುಕೊಂಡು ಊಟ ಮಾಡುತ್ತಾ ಅವರುಗಳ ಕಷ್ಠಗಳನ್ನು ಕೇಳುತ್ತ ಅವುಗಳನ್ನು ಆಲಿಸಿ ಅವರ ಕೈಲಾದ ಸಹಾಯವನ್ನು ಮಾಡುವಂತಹ ಗುಣವಂತಿ ಮಹೇಶ್ವರಿ ವಾಲಿ ಅವರದ್ದಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…