ಬೆಂಗಳೂರು: ರಾಜ್ಯದ ಕೋವಿಡ್ ಸ್ಥಿತಿಗತಿಯ ಕುರಿತು ಮಾಹಿತಿ ಪಡೆಯಲು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಆನ್ಲೈನ್ ಸಭೆ ನಡೆಸಿದರು.
ಈ ಸಭೆಯಲ್ಲಿ ಬೀದರ್, ಕಲಬುರಗಿ, ರಾಯಚೂರು ಜಿಲ್ಲೆ ವ್ಯಾಪ್ತಿಯ ಶಾಸಕರು, ಪರಿಷತ್ ಸದಸ್ಯರು, ಸ್ಥಳೀಯ ನಾಯಕರು ಭಾಗಿಯಾಗಿದ್ದರು.
ಸೇಡಂ ಮತಕ್ಷೇತ್ರದ ಕೋವಿಡ್ ಕುರಿತು ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರಿಂದ ಮಾಜಿ ಸಿಎಂ ಕುಮಾರಸ್ವಾಮಿ ಮಾಹಿತಿ ಪಡೆದರು.