ಆಳಂದ: ತಾಲೂಕಿನ ಹೋಬಳಿ ಕೇಂದ್ರವಾದ ಮಾದನ ಹಿಪ್ಪರ್ಗಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಭೇಟಿ ನೀಡಿ ಸ್ಥಳೀಯ ಮಟ್ಟದಲ್ಲಿ ಲಭ್ಯವಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು.
ಗ್ರಾಮೀಣ ಭಾಗಕ್ಕೆ ಸೋಂಕು ವ್ಯಾಪಿಸಿರುವುದರಿಂದ ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೇ ಸ್ಥಳೀಯ ವೈದ್ಯರನ್ನು ಕಂಡು ಉಪಚಾರ ಪಡೆಯಬೇಕು ಅಲ್ಲದೇ ಮನೆಯಲ್ಲಿ ಆರೈಕೆ ಪಡೆಯುತ್ತಿರುವವರು ಸ್ವಯಂ ಪ್ರೇರಿತರಾಗಿ ಕೋವಿಡ್ ಕೇಂದ್ರದಲ್ಲಿ ದಾಖಲಾಗಬೇಕು ಇದರಿಂದ ಮನೆಯವರನ್ನು ಮತ್ತು ಸುತ್ತಮುತ್ತಲಿನವರನ್ನು ಸೋಂಕಿನಿಂದ ರಕ್ಷಿಸಬಹುದು ಎಂದರು.
ಆಸ್ಪತ್ರೆಯಲ್ಲಿ ಶೀಘ್ರವಾಗಿ ಆಕ್ಸಿಜನ್ ಅಳವಡಿಸುವ ಕಾರ್ಯ ಮಾಡಬೇಕು ಇದರಿಂದ ತಾಲೂಕಾ ಆಸ್ಪತ್ರೆಯ ಹೊರೆ ಕಡಿಮೆಯಾಗುವುದಲ್ಲದೇ ಸ್ಥಳೀಯವಾಗಿ ಚಿಕಿತ್ಸೆ ದೊರೆತಂತಾಗುತ್ತದೆ. ಕೋರೋನಾ ಸೋಂಕೀತರಿಗೆ ನೀಡುವ ಕೋರೋನಾ ಕಿಟ್ನ್ನು ತ್ವರಿತವಾಗಿ ನೀಡಬೇಕು ಮತ್ತು ಸೋಂಕಿತರ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಯನ್ನು ಮಾಡಬೇಕು ಎಂದು ವೈದ್ಯರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಗುರುಶಾಂತ ಪಾಟೀಲ ನಿಂಬಾಳ, ಶಿವಪ್ಪ ಕೋಳಶೆಟ್ಟಿ, ಗಣೇಶ ಓಣಮಶೆಟ್ಟಿ, ಸಿದ್ದಾರಾಮ ತೋಳನೂರ, ತಾಲೂಕಾ ಆರೋಗ್ಯಾಧಿಕಾರಿ ಡಾ. ಅಭಯಕುಮಾರ ಜೈನ ಸೇರಿದಂತೆ ಇತರರು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…