ಸುರಪುರ: ಜಿಲ್ಲೆಯಾದ್ಯಂತ ಮೂರು ದಿನಗಳು ಕಟ್ಟು ನಿಟ್ಟಿನ ಲಾಕ್ಡೌನ್ಗೆ ನಗರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.ಆದರೆ ಕಳೆದ ಎರಡು ದಿನಗಳಿಂದ ಕಟ್ಟು ನಿಟ್ಟಿನ ಪಾಲನೆ ಮಾಡಿದ್ದ ನಗರದ ಜನತೆ ಶುಕ್ರವಾರದ ಮೂರನೇ ದಿನದ ಲಾಕ್ಡೌನ್ ಸಂದರ್ಭದಲ್ಲಿ ಕೆಲವು ಅಂಗಡಿಗಳು ಕದ್ದು ಮುಚ್ಚಿ ವ್ಯಾಪಾರ ನಡೆಸಿದರೆ,ಇನ್ನು ಅನೇಕ ಜನರು ಬೈಕ್ಗಳನ್ನು ಹತ್ತಿ ಬಿಂದಾಸ್ ಓಡಾಟ ನಡೆಸಿದ್ದು ಕಂಡುಬಂತು.
ಮೂರನೇ ದಿನದ ಲಾಕ್ಡೌನ್ ಅಂಗವಾಗಿ ನಗರದ ಪ್ರಮುಖ ವಾಣಿಜ್ಯ ಕೇಂದ್ರ ಸ್ಥಳಗಳಾದ ಮಹಾತ್ಮ ಗಾಂಧಿ ವೃತ್ತ ದರಬಾರ ರಸ್ತೆ ಹಾಗು ವೇಣುಗೋಪಾಲ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿನ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿತ್ತು.ಅಲ್ಲದೆ ಗ್ರಾಮೀಣ ಪ್ರದೇಶದಿಂದ ಜನರು ಬರದೆ ಇಡೀ ನಗರದ ಎಲ್ಳಾ ರಸ್ತೆಗಳು ಖಾಲಿ ಹೊಡೆದವು.
ಸುರಪುರ: ತಾಲೂಕಿನಾದ್ಯಂತ ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಮಗಳ ನಿರ್ಲಕ್ಷ್ಯ
ಆದರೆ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದ ಬಳಿಯಲ್ಲಿ ಕೆಲ ಬಟ್ಟೆ ಅಂಗಡಿ ಕಿರಾಣಿ ಅಂಗಡಿ ವ್ಯಾಪಾರಸ್ಥರು ಮನೆಯಲ್ಲಿ ವ್ಯಾಪಾರ ನಡೆಸುವ ಮೂಲಕ ನಿಯಮವನ್ನು ಮೀರಿದ್ದರು.ಅಲ್ಲದೆ ರಂಗಂಪೇಟೆಯಲ್ಲಿಯೂ ಬಟ್ಟೆ ಅಂಗಡಿ ಕಿರಾಣಿ ಅಂಗಡಿಯವರು ಕದ್ದು ಮುಚ್ಚಿ ವ್ಯಾಪಾರ ಮಾಡುತ್ತಿರುವಾಗ ನಗರಸಭೆ ಅಧಿಕಾರಿಗಳು ದಾಳಿ ಮಾಡಿ ದಂಡ ಹಾಕಿ ವ್ಯಾಪಾರ ಬಂದ್ ಮಾಡಿಸಿದರು.ಅಲ್ಲದೆ ಕೆಲವು ಬೈಕ್ಗಳನ್ನು ವಶಕ್ಕೆ ಪಡೆದ ಪೊಲೀಸರು ದಂಡ ಹಾಕಿ ಎಚ್ಚರಿಸಿದರು.ಇದರ ಮದ್ಯೆ ಅನೇಕ ಜನರು ಬೈಕ್ ಹತ್ತಿ ಮಹಾತ್ಮ ಗಾಂಧಿ ವೃತ್ತದಲ್ಲಿ ಬಿಂದಾಸಾಗಿ ಸುತ್ತಿದ್ದು ಕಂಡು ಬಂತು.
ಪೊಲೀಸರು ಯಾವುದೇ ಕಾರಣಕ್ಕೂ ಲಾಠಿ ಬೀಸದಂತೆ ಸರಕಾರ ಎಚ್ಚರಿಕೆ ನೀಡಿದ್ದನ್ನೆ ಬಂಡವಾಳ ಮಾಡಿಕೊಳ್ಳುವ ಪುಂಡರು ಪೊಲೀಸರ ಕಣ್ಣು ತಪ್ಪಿಸಿ ಬೈಕ್ ಓಡಾಟ ನಡೆಸಿದರು.ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಘೋಷಣೆಯಾಗಿದ್ದ ಮೂರು ದಿನಗಳ ಕಟ್ಟುನಿಟ್ಟಿನ ಲಾಕ್ಡೌನ್ ತಾಲೂಕಿನಲ್ಲಿ ಯಶಸ್ವಿಯಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…