ಕಲಬರುಗಿ: ರಾಜ್ಯದಲ್ಲಿರುವ ಮಠ ಮಂದಿರಗಳ ಖಾಸಗಿ ದೇವಾಲಯದಲ್ಲಿ ಪೂಜೆ ಮಾಡುವ ವೀರಶೈವ ಲಿಂಗಾಯತ ಧರ್ಮದ ಜಂಗಮ ಅರ್ಚಕರಿಗೆ ಹಾಗೂ ಪುರೋಹಿತರಿಗೆ ಜ್ಯೋತಿಷ್ಯಗಳಿಗೆ ಮತ್ತು ಆಗಮಿಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಾದ ಬಿ ಎಸ್ ಯುಡಿಯೂರಪ್ಪನವರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಕಲಬರುಗಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯರಾದ ನಾಗಲಿಂಗಯ್ಯ ಮಠಪತಿ ಮನವಿ ಮಾಡಿದ್ದಾರೆ
ಈಗಾಗಲೇ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಅರ್ಚಕರಿಗೆ ಮೂರು ತಿಂಗಳ ತಸ್ತೀಕ್ ಬಿಡುಗಡೆ ಮಾಡಿದ್ದು ಖಾಸಗಿಯಾಗಿ ದೇವಾಲಯದಲ್ಲಿ ಪೂಜೆ ಮಾಡುವ ನಾಡಿನ ಹತ್ತಾರು ಸಾವಿರ ಅರ್ಚಕರ ಇದರಿಂದ ವಂಚಿತರಾಗುತ್ತಿದ್ದು ಇದಕ್ಕಾಗಿ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಸರೆಯಾಗುವಂತೆ ಮಠಪತಿ ವಿನಂತಿಸಿದ್ದಾರೆ
ನಾಡಿನ ಜನ ಮನದಲ್ಲಿ ಸಂಸ್ಕೃತಿ ಸಂಸ್ಕಾರ ಬಿತ್ತುವ ಮೂಲಕ ಪುರದ ಹಿತವನ್ನೇ ತಮ್ಮ ಕಾಯಕವಾಗಿಸಿಕೊಂಡು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಅರ್ಚಕರು.ಆಗಮಿಕರು. ಪುರೋಹಿತರ ಬದುಕು ಇಂದು ಸಂಕಷ್ಟದಲ್ಲಿ ಸಿಲುಕಿದ್ದು ಅನೇಕ ಕುಟುಂಬಗಳು ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ
ಕಳೆದ ವರ್ಷ ಸಹ ಸರ್ಕಾರ ಧಾರ್ಮಿಕ ಇಲಾಖೆಯಲ್ಲಿ ಬರುವ ದೇವಾಲಯಗಳ ಅರ್ಚಕರಿಗೆ ಮಾತ್ರ ಧನ ಸಹಾಯ ಮಾಡಲಾಗಿತ್ತು ಈ ಬಾರಿಯ ಸಹ ಆದೇ ರೀತಿ ಮಾಡಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮಠಪತಿ ಅವರು ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳು ಬಂದ್ ಆಗಿದ್ದು ಇದರ ಪರಿಣಾಮ ಅರ್ಚಕರ ಬದುಕು ಕಷ್ಟ ಸಾಧ್ಯವಾಗಿದ್ದು ಇದರ ಜೊತೆಗೆ ಮದುವೆ ಗೃಹ ಪ್ರವೇಶ ಸೇರಿದಂತೆ ಮಂಗಳ ಕಾರ್ಯಗಳು ಸಹ ಸಂಕ್ಷಿಪ್ತವಾಗಿ ನೇರವೇರಿಸುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನೇ ನಂಬಿಕೊಂಡು ಜೀವನ ಸಾಗಿಸುವ ಬಡ ಪುರೋಹಿತರ ಜೀವನ ಇಂದು ಸಮ್ಯಸೆಯ ಸುಳಿಯಲ್ಲಿ ಸಿಲುಕಿದ್ದು ಕೂಡಲೇ ತಾವುಗಳು ನೆರವು ನೀಡುವ ಮೂಲಕ ಸಹಕಾರಿಯಾಗುವಂತೆ ಮುಖ್ಯಮಂತ್ರಿಗಳಲ್ಲಿ ಮಠಪತಿ ಅವರು ಕೋರಿದ್ದಾರೆ
ಪ್ಯಾಕೇಜ್ ಜೊತೆಗೆ ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಜಂಗಮ ಪುರೋಹಿತ ಅರ್ಚಕರಿಗೆ ಹಾಗೂ ಆಗಮಿಕರಿಗೆ ಮತ್ತು ಜ್ಯೋತಿಷ್ಯಿಗಳಿಗೆ ಆಹಾರ ಕಿಟ್ ವಿತರಣೆ ಮಾಡಬೇಕು ಕೂರೋನಾ ರೋಗಕ್ಕೆ ಬಲಿಯಾಗಿರುವವರ ಕುಟುಂಬಕ್ಕೆ ಧನ ಸಹಾಯ ಮಾಡುವಂತಿ ಮನವಿ ಮಾಡಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…
ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…
ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…
ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…
ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …
ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…