ಕಾಲು ಜಾರಿ ಬಿದ್ದು ಎಪಿಎಂಸಿ ಮಾಜಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ ನಿಧನ

0
30
ಸುರಪುರ: ಹೊಲಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಸುರಪುರ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ನಿಂಗಣ್ಣ ಬಾದ್ಯಾಪುರ ನಿಧನರಾಗಿದ್ದಾರೆ.
ಬಾದ್ಯಾಪುರ ಗ್ರಾಮದ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಹೋಗುವ ಸಂದರ್ಭ ರಸ್ತೆ ಪಕ್ಕದಲ್ಲಿದ್ದ ಕಿರು ಸೇತುವೆಯೊಂದನ್ನು ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟಾಗಿ ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವವಾಗಿದ್ದರಿಂದ ನಿಂಗಣ್ಣ ಬಾದ್ಯಾಪುರ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಗ್ರಾಮದ ಮುಖಂಡ ಕೃಷ್ಣ ಬಾದ್ಯಾಪುರ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here