ಮುಂಗಾರು ಬೆಳೆ ಬಿತ್ತನೆಗೆ ಡಿಸಿಸಿ ಬ್ಯಾಂಕ್ ಸಾಲ ನೀಡುವಂತೆ ಜ್ಯೋತಿ ಮನವಿ

0
14

ಕಲಬುರಗಿ: ಜೂನ್ ತಿಂಗಳಲ್ಲಿ ಮುಂಗಾರು ಬೆಳೆ ಬಿತ್ತನೆ ಪ್ರಾರಂಭವಾಗಲಿದ್ದು ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಮುಂಗಾರು ಬೆಳೆ ಬಿತ್ತನೆ ಹೊಸ ಸಾಲವನ್ನು ನೀಡಬೇಕೆಂದು ಕಲಬುರಗಿ ಮತ್ತು ಯಾದಗಿರಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಲ್ಲಿ ಇಂದಿರಾಗಾಂಧಿ ಅಭಿಮಾನಿಗಳ ವೇದಿಕೆ ಜಿಲ್ಲಾಧ್ಯಕ್ಷೆ ಜ್ಯೋತಿ ಎಂ. ಮರಗೋಳ ಅವರು ಮನವಿ ಮಾಡಿದ್ದಾರೆ.

೨೦೧೮ ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿ ಅವರು ಡಿಸಿಸಿ ಬ್ಯಾಂಕಿನ ಒಂದು ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಘೋಷಣೆ ಮಾಡಿದರು. ಆದರೆ ಮೂರು ವರ್ಷ ಕಳೆದರು ರೈತರ ಹೆಳೆ ಸಾಲ ಮನ್ನಾ ಮಾಡಿ ಹೊಸ ಸಾಲ ಕೊಡುವುದರ ಬಗ್ಗೆ ಯಾವುದೇ ರೀತಿಯಲ್ಲಿ ರೈತರಿಗೆ ಮಾಹಿತಿ ಇಲ್ಲದ ಕಾರಣದಿಂದ ರೈತರು ಗೊಂದಲದಲ್ಲಿ ಸಿಲುಕಿಕೊಂಡಿದ್ದಾರೆ ಎಂದರು.

Contact Your\'s Advertisement; 9902492681

ಸತತವಾಗಿ ಮೂರು ವರ್ಷಗಳಿಂದ ಪ್ರವಾಹ, ಕರೋನಾ ತೋಗರಿ ಬೆಳೆಗೆ ಬೆಂಬಲ ಬೆಲೆ ಸಿಗದ ಕಾರಣದಿಂದಾಗಿ ರೈತರು ಕಂಗಾಲಾಗಿದ್ದಾರೆ ಆದ್ದರಿಂದ ಜೂನ್ ತಿಂಗಳಲ್ಲಿ ಮುಂಗಾರು ಬಿತ್ತನೆಯನ್ನು ಪ್ರಾರಂಭವಾಗಲಿದ್ದು ರೈತರಿಗೆ ಸಾಲವನ್ನು ನೀಡಬೇಕೆಂದು ಮನವಿ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here