ಸುರಪುರ: ಇಂದು ನಾವೆಲ್ಲ ಕರ್ನಾಟಕದ ರಾಜಧಾನಿ ಎಂದು ಕರೆಯುವ ಬೆಂಗಳೂರು ಅಂದು ಬೆಂದಕಾಳೂರಾಗಿತ್ತು.ಅದರ ಸಂಪೂರ್ಣ ಅಭೀವೃಧ್ಧಿ ಪಡಿಸಿದ ಶ್ರೇಯಸ್ಸು ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ.ಆದ್ದರಿಂದ ಕೆಂಪೇಗೌಡರು ಈ ನಾಡು ಕಂಡ ಉತ್ತಮ ಆಡಳಿತಗಾರರಾಗಿದ್ದಾರೆ ಎಂದು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ ಮಾತನಾಡಿದರು.
ನಗರದ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಜೆ ಸಲ್ಲಿಸಿ ಮಾತನಾಡಿ,ಕೆಂಪೇಗೌಡರು ಕಟ್ಟಿಸಿದ ಕೆರೆ,ಕುಂಟೆಗಳು ಹಾಗು ಕೋಟೆ ಕೊತ್ತಲಗಲು ಇಂದಿಗು ಅವರ ಆಡಳಿತದ ಜೀವಂತ ಸಾಕ್ಷಿಯಾಗಿವೆ.ಅವರ ಆಡಳಿತದ ಸಂದರ್ಭದಲ್ಲಿ ಇಡೀ ಅವರ ಸಾಮ್ರಾಜ್ಯ ಸುಭಿಕ್ಷೆಯಿಂದ ಕಂಗೊಳಿಸುತ್ತಿತ್ತು.ಅವರ ಆಡಳಿತ ಇಂದಿನ ಅನೇಕರಿಗೆ ಮಾದರಿಯಾಗಿದೆ.ಆದ್ದರಿಂದ ಅವರ ಆದರ್ಶವನ್ನು ನಾವೆಲ್ಲರು ಅರಿಯಬೇಕೆಂಬ ಉದ್ದೇಶದಿಂದ ಸರಕಾರ ಅವರ ಜಯಂತಿಯನ್ನು ಆಚರಿಸುತ್ತಿದೆ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಲಾಯಿತು.ಕೆಂಪೇಗೌಡರ ಅಭಿಮಾನಿಗಳಾದ ಅಪ್ಪಾರಾವ್ ನಾಯಕ,ಸಿದ್ದನಗೌಡ ಹೆಬ್ಬಾಳ,ಮಲ್ಲು ಬಾದ್ಯಾಪುರ ಹಾಗು ತಹಸೀಲ್ ಕಚೇರಿ ಸಿಬ್ಬಂದಿಗಳಾದ ಸಿರಸ್ತೇದಾರ ಕೊಂಡಲ ನಾಯಕ,ಕಂದಾಯ ನಿರೀಕ್ಷಕ ಗುರುಬಸಪ್ಪ,ಪ್ರವೀಣ ಕುಮಾರ,ಭೀಮರಾಯ ಯಾದವ,ಗ್ರಾಮ ಲೆಕ್ಕಿಗರಾದ ಸೋಮಶೇಖರ ,ಶ್ವೇತ,ಮಲ್ಲಮ್ಮ,ಸಾವಿತ್ರಿ,ಸೋಮನಾಥ ಅಂಗಡಿ,ಹಣಮಂತ ಕಮತಗಿ ಸೇರಿದಂತೆ ಅನೇಕರಿದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…