ಕಲಬುರಗಿ: ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತರಕಾರಿ ಮಾರಾಟಗಾರರು ಸಾಕಷ್ಟು ಸಮಸ್ಯಗಳು ಎದುರಿಸುತ್ತಿದ್ದು ಅವರಿಗೆ ಸೂಕ್ತ ಸ್ಥಳ ನಿಗದಿ ಪಡೆಸಿ ಅನುಕೂಲ ಮಾಡಿಕೊಡಬೇಕೆಂದು ಎಸ್.ಡಿ.ಪಿ.ಐ ಜಿಲ್ಲಾ ಘಟಕ ಒತ್ತಾಯಿಸಿದೆ.
ಪಕ್ಷದ ಜಿಲ್ಲಾ ಅಧ್ಯಕ್ಷರಾದ ಮೊಹಮ್ಮದ್ ಮೋಹಸಿನ್ ಅವರ ನೇತೃತ್ವದಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಿದ ಅವರು ತರಕಾರಿ ವ್ಯಾಪಾರಿಗಳಿಗೆ ಸ್ಥಳ ನಿಗದಿ ಪಡಿಸಿ ಕೋವಿಡ್ ನಿಯಮ ಪಾಲನೆಗಾಗಿ ವಾಲೇಂಟಿಯರ್ಸ ನೇಮಿಸಬೇಕೆಂದು ಆಗ್ರಹಿಸಿದ್ದಾರೆ.