ಶಹಾಬಾದ: ಕೋವಿಡ್ ನಿರ್ವಹಣೆಯಲ್ಲಿ ನಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾವೂರ ಉಪಕೇಂದ್ರದ ಗೋಳಾ(ಕೆ) ಗ್ರಾಮದ ಆಶಾ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.
ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರಾದ ನಮಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ನಮ್ಮ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ನಮಗೆ ವಿಶೇಷ ಪ್ರೋತ್ಸಾಹ ಧನ ನೀಡಿಲ್ಲ.
ಕೊವಿಡ್ 19 ನಿಯಂತ್ರಣಕ್ಕಾಗಿ ಶ್ರಮಿಸಿದ ಅನೇಕ ಆಶಾ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಕೊರೊನಾ ವೈರಸ್ ಸೋಂಕಿತರಾಗಿದ್ದಾರೆ. ಆದರೂ ನಮಗೆ ಬರಬೇಕಾದ ಮಾಸಿಕ ಗೌರವಧನ ಕೊಡದೇ ರಾಜ್ಯ ಸರ್ಕಾರ ನಮ್ಮ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಕೊರೊನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು.
ದುಡಿದವರಿಗೆ ಗೌರವಧನ ನೀಡಬೇಕು. ಕರೊನಾ ವಾರಿಯರ್ಸಗಳಿಗೆ ನೀಡಿದಂತೆ ನಮಗೂ ವಿಶೇಷ ಪ್ರೋತ್ಸಾಹ ಧನ ನೀಡಬೇಕು. ಅಲ್ಲದೇ ನಮಗೂ ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಗೂ ಸ್ಯಾನಿಟೈಜರ್ ಒದಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಾದ ಗಂಗಮ್ಮ, ಶಕುಂತಲಾ,ದ್ರೌಪದಿ, ಸಂತೋಷಿ, ಜಲ್ಲಮ್ಮ, ಶಾಂತಾಬಾಯಿ ಇತರರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…