ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ನಿವೃತ್ತ ನಿರೀಕ್ಷಕರಾದ ಶಿವಾನಂದ ಗಾಣಿಗೆರ್ ಹಾಗೂ ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಉಪಾಧ್ಯಕ್ಷರಾದ ಶರಣು ಆರ್.ಕಟ್ಟಿಮನಿ ಇವರುಗಳ ನೇತೃತ್ವದಲ್ಲಿ ಆಸ್ಪತ್ರೆಗಳು, ರೈಲು ನಿಲ್ದಾಣ, ಗುಡಿಸಲುಗಳು ಹಾಗೂ ವಿವಿಧ ಬಡಾವಣೆಯಲ್ಲಿ ಇರುವ ಬಡವರು ಮತ್ತು ನಿರ್ಗತಿಕರಿಗೆ ಅನ್ನಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಸ್ ಸರಡಗಿ, ಜಯ ಕರ್ನಾಟಕ ರಕ್ಷಣಾ ಸೇನೆಯ ನಗರ ಅಧ್ಯಕ್ಷ ಉದಯ್ ಆರ್ಕಟ್ಟಿಮನಿ ಹಾಗೂ ಜಯ ಕರ್ನಾಟಕ ಸಂಘಟನೆಯ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.