ನಿರ್ಗತಿಕರಿಗೆ ಅನ್ನಸಂತರ್ಪಣೆ

0
15

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ನಿವೃತ್ತ ನಿರೀಕ್ಷಕರಾದ ಶಿವಾನಂದ ಗಾಣಿಗೆರ್ ಹಾಗೂ ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಉಪಾಧ್ಯಕ್ಷರಾದ ಶರಣು ಆರ್.ಕಟ್ಟಿಮನಿ ಇವರುಗಳ ನೇತೃತ್ವದಲ್ಲಿ ಆಸ್ಪತ್ರೆಗಳು, ರೈಲು ನಿಲ್ದಾಣ, ಗುಡಿಸಲುಗಳು  ಹಾಗೂ ವಿವಿಧ ಬಡಾವಣೆಯಲ್ಲಿ ಇರುವ ಬಡವರು ಮತ್ತು ನಿರ್ಗತಿಕರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಸ್ ಸರಡಗಿ, ಜಯ ಕರ್ನಾಟಕ ರಕ್ಷಣಾ ಸೇನೆಯ ನಗರ ಅಧ್ಯಕ್ಷ ಉದಯ್ ಆರ್‌ಕಟ್ಟಿಮನಿ ಹಾಗೂ ಜಯ ಕರ್ನಾಟಕ ಸಂಘಟನೆಯ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here