ಸುರಪುರ: ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ಲಾಠಿ ಪ್ರಯೋಗ ಮಾಡಬೇಡಿ ಎನ್ನುವುದನ್ನೆ ಬಂಡವಾಳ ಎಂಬಂತೆ ಭಾವಿಸುತ್ತಿರುವ ಜನರು ಈಗ ಲಾಕ್ಡೌನ್ಗೆ ಡೊಂಟ್ ಕೇರ್ ಎಂಬಂತೆ ಓಡಾಟವನ್ನು ನಡೆಸಿದರು.
ಸೋಮವಾರ ಬೆಳಿಗ್ಗೆ ೦೬ ಗಂಟೆಯಿಂದ ಶುಕ್ರವಾರ ಬೆಳಿಗ್ಗೆ ೦೬ ಗಂಟೆಯವರೆಗೆ ಜಿಲ್ಲಾಧಿಕಾರಿಗಳು ಕಠಿಣ ಲಾಕ್ಡೌನ್ ಜಾರಿ ಮಾಡಿ ಆದೇಶ ಹೊರಡಿಸಿ ಯಾರೂ ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬರಬೇಡಿ ಎಂದು ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ನಿರಂತರ ಎಚ್ಚರಿಕೆ ನೀಡುತ್ತಿದ್ದರು ಜನರು ಸೋಮವಾರ ಅನಾವಶ್ಯಕವಾಗಿ ಜನರು ಹೊರಗಡೆ ಓಡಾಡಿದ್ದು ಕಂಡು ಬಂತು.ನಗರದ ದರಬಾರ ರಸ್ತೆ ಮಹಾತ್ಮ ಗಾಂಧಿ ವೃತ್ತ ಹಾಗು ಶ್ರೀ ವೇಣುಗೋಪಾಲ ಸ್ವಾಮಿ ರಸ್ತೆ ಎಲ್ಲೆಡೆಯು ಬೈಕ್ ಸವಾರರು ಅನಗತ್ಯವಾಗಿ ಓಡಾಡುತ್ತಿದ್ದರು.ಈ ಸಂದರ್ಭದಲ್ಲಿ ಪೊಲೀಸರು ಕೆಲವರ ಬೈಕ್ಗಳನ್ನು ಹಿಡಿದು ದಂಡ ಹಾಕಿದರು ಕೂಡ ಜನರ ಓಡಾಟಕ್ಕೆ ಸಂಪೂರ್ಣ ಕಡಿವಾಣ ಬೀಳಲಿಲ್ಲ.
ಅಲ್ಲದೆ ಮಾರುಕಟ್ಟೆಯಲ್ಲಿ ಕೆಲವು ಬಟ್ಟೆ ಮತ್ತು ಬಂಗಾರ ಮತ್ತು ಪಾತ್ರೆ ಪಗಡೆ ಮಾರಾಟದ ಅಂಗಡಿಗಳು ಕದ್ದು ಮುಚ್ಚಿ ವ್ಯಾಪಾರ ನಡೆಸಿದರು.ಹೊರಗಡೆ ತೋರಿಕೆಗೆ ಅಂಗಡಿ ಮುಚ್ಚಿದಂತೆ ಕಂಡು ಬಂದರು ಒಳಗಡೆ ಗ್ರಾಹಕರನ್ನು ಬಿಟ್ಟುಕೊಂಡು ವ್ಯಾಪಾರ ನಡೆಸಿದರು.ಅಲ್ಲದೆ ಕೆಲವರು ಚಪ್ಪಲಿ ಮಾರಾಟವನ್ನು ಬೀದಿಯಲ್ಲಿಟ್ಟು ಮಾರಾಟ ಮಾಡುವ ಮೂಲಕ ಕೋವಿಡ್ ನಿಯಮವನ್ನು ಉಲ್ಲಂಘಿಸಿದರು.ಇದರಿಂದಾಗಿ ಸಾರ್ವಜನಿಕರು ಈಗ ಕೊರೊನಾ ಸೊಂಕು ನಿರ್ಮೂಲನೆ ಕುರಿತು ಕಳವಳ ವ್ಯಕ್ತಪಡಿಸುತ್ತಿದ್ದಾರೆ.
ಕೆಲವು ಬಟ್ಟೆ ಮತ್ತು ಪಾತ್ರೆಗಳ ಮಾರಾಟದ ಅಂಗಡಿಗಳು ಕದ್ದು ಮುಚ್ಚಿ ವ್ಯಾಪಾರ ನಡೆಸಿದ ಅಂಗಡಿಗಳ ಮೇಲೆ ನಗರಸಭೆ ಸಿಬ್ಬಂದಿಗಳು ದಾಳಿ ಮಾಡಿ ದಂಡ ವಿಧಿಸಿದ ಘಟನೆಯು ನಡೆದಿದೆ.ಒಟ್ಟಾರೆಯಾಗಿ ನಾಲ್ಕು ದಿನಗಳ ಕಠಿಣ ಲಾಕ್ಡೌನ್ ಮೊದಲ ದಿನ ಬಿಗಿಯಿಲ್ಲದಾಗಿದ್ದು ಇನ್ನುಳಿದ ಮೂರು ದಿನಗಳಾದರೂ ಜನರು ತಮ್ಮ ಅನಗತ್ಯ ಓಡಾಟವನ್ನು ನಿಲ್ಲಿಸುವರೆ ಕಾದು ನೋಡಬೇಕಾಗಿದೆ.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…