ವೆಂಟಿಲೇಟರ್‌ಗಳ ಬಳಕೆಗೆ ತರಬೇತಿ ನೀಡುವ ಕಾರ್ಯಕ್ರಮ ಹೆಚ್ಚಿಸಿ: ಜಗದೀಶ್‌ ಶೆಟ್ಟರ್‌

ಬೆಂಗಳೂರು: ಕೋವಿಡ್‌ ರೋಗಿಗಳಲ್ಲಿ ವೆಂಟಿಲೇಟರ್ ಗಳ ಬಳಕೆಯ ಬಗ್ಗೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಲ್ಲಿ ಪ್ರಾಯೋಗಿಕ ಕ್ರಮಗಳ ಬಗ್ಗೆ ತರಬೇತಿಯನ್ನು ನೀಡುವ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹೆಚ್ಚಿಸಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್‌ ಶೆಟ್ಟರ್‌ ಅಭಿಪ್ರಾಯಪಟ್ಟರು.

ಇಂದು ಕರ್ನಾಟಕ ಇನ್ಸಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಹುಬ್ಬಳ್ಳೀ, ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿಗಳ ಸಂಘ ಮತ್ತು ಇಂಡಿಯನ್‌ ಸೊಸೈಟಿ ಆಫ್‌ ಅನಸ್ತೇಸಿಯಾಲಜಿಸ್ಟ್‌ ಹುಬ್ಬಳ್ಳಿ ಜಂಟಿಯಾಗಿ ಕೋವಿಡ್‌ ರೋಗಿಗಳಲ್ಲಿ ವೆಂಟಿಲೇಟರ್‌ ಬಳಕೆಯ ಬಗ್ಗೆ ಪ್ರಾಯೋಗಿಕ ಕ್ರಮಗಳ ಬಗ್ಗೆ ಆಯೋಜಿಸಿದ್ದ ವೆಬಿನಾರ್‌ ನಲ್ಲಿ ಭಾಗವಹಿಸಿ ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ ಅವರು ಪಾಲ್ಗೊಂಡು ಮಾತನಾಡಿದರು.

ದೇಶದ ಗ್ರಾಮೀಣ ಭಾಗದಲ್ಲೂ ಅತ್ಯಾಧುನಿಕ ಚಿಕಿತ್ಸೆಗೆ ಅನುಕೂಲವಾಗಲು ಪ್ರಧಾನಮಂತ್ರಿಗಳ ಅನುದಾನದ ಅಡಿಯಲ್ಲಿ ಪ್ರತಿ ತಾಲ್ಲೂಕಿಗೂ 6 ವೆಂಟಿಲೇಟರ್‌ ಗಳನ್ನು ನೀಡಲಾಗಿತ್ತು. ಆದರೆ, ಆವುಗಳನ್ನು ಬಳಸುವ ತಜ್ಞ ವೈದ್ಯರು ಇಲ್ಲದೆ ಬಹುತೇಕ ವೆಂಟಿಲೇಟರ್‌ ಗಳು ಉಪಯೋಗ ಆಗುತ್ತಿಲ್ಲ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ತುರ್ತು ಸಂಧರ್ಭದಲ್ಲಿ ವೆಂಟಿಲೇಟರ್‌ ಗಳನ್ನು ಉಪಯೋಗಿಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರಾಯೋಗಿಕ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಇದರಿಂದ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅನುಕೂಲವಾಗುತ್ತದೆ ಎಂದರು.

ಕೋವಿಡ್‌ 2 ನೇ ಅಲೆಯಲ್ಲಿ ಆಮ್ಲಜನಕ ಹಾಗೂ ವೆಂಟಿಲೇಟರ್ ಬೆಡ್‌ ಗಳ ಬೇಡಿಕೆ ಹೆಚ್ಚಾಗಿದೆ. ಆದರೆ, ಸೂಕ್ತ ತರಬೇತಿ ಇಲ್ಲದೆ ವೆಂಟಿಲೇಟರ್ ಗಳ ಉಪಯೋಗದಿಂದ ಆಗುವ ಹಾನಿಯೇ ಹೆಚ್ಚು. ಈ ನಿಟ್ಟಿನಲ್ಲಿ ತಜ್ಞ ವೈದ್ಯರು ಇಲ್ಲದ ಕಡೆಯಲ್ಲಿ ವೆಂಟಿಲೇಟರ್‌ಗಳನ್ನು ಪರಿಣಾಮಕಾರಿಯಾಗಿ ಬಳಸುವುದರ ಬಗ್ಗೆ ವೈದ್ಯಕೀಯ ಸಿಬ್ಬಂದಿಗಳಲ್ಲಿ ತರಬೇತಿ ನೀಡಬೇಕು ಎಂದು ಹೇಳಿದರು.

ಅಲ್ಲದೆ, ವೈದ್ಯಕೀಯ ಸಿಬ್ಬಂದಿಗಳು ಆಮ್ಲಜನಕವನ್ನು ಮಿತವಾಗಿ ಬಳಸುವಂತೆ ಹಾಗೂ ವೆಂಟಿಲೇಟರ್‌ಗಳನ್ನು ಬಳಸಲು ಸೂಕ್ತ ತರಬೇತಿಯನ್ನು ಪಡೆದುಕೊಳ್ಳುವಂತೆ ಈ ವೆಬಿನಾರ್‌ ಮೂಲಕ ವೈದ್ಯಕೀಯ ಸಿಬ್ಬಂದಿಗಳಲ್ಲಿ ತಿಳುವಳಿಕೆ ಮೂಡಿಸುವಂತೆ ಹೇಳಿದರು.

ವೆಬಿನಾರ್‌ ನಲ್ಲಿ ಕೋವಿಡ್‌ ತಜ್ಞ ಸಮಿತಿಯ ಸದಸ್ಯರು ಹಾಗೂ ವೆಬಿನಾರ್‌ ನ ಅಧ್ಯಕ್ಷರಾದ ಡಾ. ಜಿ.ಬಿ ಸುತ್ತೂರ್‌, ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ ಸಚ್ಚಿದಾನಂದ, ಡಾ ರಾಜೇಶ್‌ ಫಾಟ್ಕೆ, ಡಾ. ಬಸವಾರಾಜ್‌ ಕೊಲ್ಲಾಪುರ್‌, ಡಾ ಇಮ್ರಾನ್‌ ಶೋಹ್ಲಾಪುರ್‌ ಪಾಲ್ಗೊಂಡಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420