ಶಹಾಬಾದ: ಕರೊನಾ ಮಹಾಮಾರಿ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಮಗುಳನಾಗಾವನ ಕಟ್ಟಿಮನಿ ಹಿರೇಮಠದ ಸಿದ್ಧಲಿಂಗೇಶ್ವರ ಜಾತ್ರಾಮಹೋತ್ಸವವನ್ನು ರದ್ದು ಮಾಡಲಾಗಿದೆ ಎಂದು ಪೀಠಾಧಿಪತಿಗಳಾದ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದ್ದಾರೆ.
ಈಗಾಗಲೇ ಜನರು ಕರೊನಾದಿಂದ ಸಾಕಷ್ಟು ನೋವುಗಳನ್ನು ಕಂಡಿದ್ದಾರೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಆ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಆದ್ದರಿಂದ ಇದೇ ಮೇ 27 ರಂದು ನಡೆಯಬೇಕಿದ್ದ ಜಾತ್ರಮಹೋತ್ಸವನ್ನು ರದ್ದಪಡಿಸಲಾಗಿದ್ದು, ಅಂದು ಯಾರು ಮಠದ ಕಡೆಗೆ ಬರದೇ, ಮನೆಯಲ್ಲೇ ಗುರು ಸಿದ್ಧಲಿಂಗೇಶ್ವರ ಧ್ಯಾನ ಮಾಡಿ ಎಂದು ಪ್ರಕಟಣೆಯಲ್ಲಿ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದ್ದಾರೆ.