ಬುದ್ಧ ಪೂರ್ಣಿಮೆ ಆಚರಣೆಯ ಸಮಯವೂ ಮತ್ತು ಮಹತ್ವವೂ..!

0
47

ಅಲ್ಲದೇ ಮೋಕ್ಷ ಹುಡುಕುತ್ತಾ ಪ್ರೀತಿಯ ಬಂಧನದಲ್ಲಿ..!!

ತನ್ನ 29ನೇ ವಯಸ್ಸಿನಲ್ಲಿಯೇ ಸತ್ಯವನ್ನು ಹುಡುಕುತ್ತಾ ಪ್ರಪಂಚ ಪರ್ಯಟನೆ ಕೈಗೊಂಡ ಮಹಾನ್​ ವ್ಯಕ್ತಿ ಬುದ್ಧ. ಬಡವರಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟವನು. ಮೋಕ್ಷ ಸಾಧಿಸಲು ಕರುಣೆ ಮತ್ತು ಶಾಂತಿಯ ಮಾರ್ಗದಲ್ಲಿ ಸಾಗಬೇಕು ಎಂದು ಲೋಕಕ್ಕೆ ಸಾರಿದಾತ ನಮ್ಮ ಬುದ್ಧ.

Contact Your\'s Advertisement; 9902492681

ಬೌದ್ಧ ಧರ್ಮದ ಸಂಸ್ಥಾಪಕ ಬುದ್ಧ ಕರುಣೆ ಶಾಂತಿಯನ್ನು ಸಾರಿದ ಮಹಾನ್​ ವ್ಯಕ್ತಿ. ವೈಶಾಖ ಮಾಸದ ಹುಣ್ಣಿಮೆ ದಿನದಂದು ಬುದ್ಧ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷದ ಬುದ್ಧ ಪೂರ್ಣಿಮೆ ಆಚರಣೆಯನ್ನು ಮೇ 26ರಂದು ಆಚರಿಸಲಾಗುತ್ತಿದೆ. ಹಿಂದೂ ಕ್ಯಾಲೆಂಡರ್​ ಪ್ರಕಾರ ವೈಶಾಖ ತಿಂಗಳ ಹುಣ್ಣಿಮೆಯ ದಿನದಂದು ಹಾಗೂ ಗ್ರೆಗೋರಿಯನ್​ ಕ್ಯಾಲೆಂಡರ್​ ಪ್ರಕಾರ ಏಪ್ರಿಲ್​ ಅಥವಾ ಮೇ ತಿಂಗಳಿನಲ್ಲಿ ಆಚರಿಸಲಾಗುತ್ತದೆ.

ಗೌತಮ ಬುದ್ಧನು ಈ ದಿನ ಜ್ಞಾನೋದಯವನ್ನು ಪಡೆದನು ಎಂಬುದಾಗಿ ಇತಿಹಾಸದ ಮೂಲಕ ತಿಳಿದುಕೊಳ್ಳಬಹುದು. ಬುದ್ಧನ ಜನನ ಮತ್ತು ಮರಣದ ದಿನದ ಕುರಿತಾಗಿ ಇತಿಹಾಸದಲ್ಲಿ ಗೊಂದಲವಿದೆ. ಹಾಗೂ ಕೆಲವು ನಂಬಿಕೆ ಪ್ರಕಾರ ಇಂದು ಬುದ್ಧನ ಜನ್ಮ ದಿನ ಎಂದೂ ಕರೆಯಲಾಗುತ್ತದೆ. ಈ ಪ್ರಕಾರ ಬುದ್ಧ ಪೂರ್ಣಿಯನ್ನು ಆಚರಿಸುತ್ತಾ ಬಂದಿದ್ದಾರೆ. ಈ ವರ್ಷ ಬುದ್ಧನ 2583ನೇ ಜನ್ಮ ಆಚಣೆಯನ್ನು ಮಾಡಲಾಗುತ್ತಿದೆ.

ಇತಿಹಾಸ: ಗೌತಮ ಬುದ್ಧ ಸಿದ್ದಾರ್ಥ ಗೌತಮನಾಗಿ ಜನಿಸಿದವನು. ಹೆಚ್ಚಿನ ಜನರು ನೇಪಾಳದ ಲುಂಬಿನಿ ಬುದ್ಧನ ಜನ್ಮ ಸ್ಥಳವೆಂದು ನಂಬಿದ್ದಾರೆ. ತನ್ನ ಧರ್ಮ ಪಾಠವನ್ನು ಮೊದಲು ಸಾರಾನಾಥದಲ್ಲಿ ಕಲಿತನು. ನಂತರ ಗೌತಮಬುದ್ಧನು ಬೋಧಗಯಾದಲ್ಲಿ ಜ್ಞಾನೋದಯವನ್ನು ಪಡೆದವನು ಎಂಬುದನ್ನು ಇತಿಹಾಸ ತಿಳಿಸುತ್ತದೆ.

ಮಹತ್ವ: ತನ್ನ 29ನೇ ವಯಸ್ಸಿನಲ್ಲಿಯೇ ಸತ್ಯವನ್ನು ಹುಡುಕುತ್ತಾ ಪ್ರಪಂಚ ಪರ್ಯಟನೆ ಕೈಗೊಂಡ ಮಹಾನ್​ ವ್ಯಕ್ತಿ ಬುದ್ಧ. ಬಡವರಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟವನು. ಮೋಕ್ಷ ಸಾಧಿಸಲು ಕರುಣೆ ಮತ್ತು ಶಾಂತಿಯ ಮಾರ್ಗದಲ್ಲಿ ಸಾಗಬೇಕು ಎಂದು ಲೋಕಕ್ಕೆ ಸಾರಿದಾತ. ಸರಿಯಾದ ತಿಳುವಳಿಕೆ, ಸರಿಯಾದ ಚಿಂತನೆ, ಸರಿಯಾದ ಕ್ರಿಯೆ, ಮಾತು, ಮನಸ್ಸು, ಪ್ರಯತ್ನ, ಏಕಾಗ್ರತೆಯ ಮೌಲ್ಯಗಳನ್ನು ತಿಳಿಸಿಕೊಟ್ಟ ಮಹಾನ್​ ವ್ಯಕ್ತಿ ಬುದ್ಧ. ಈ ದಿನದಂದು ಭಕ್ತರು ಬೌದ್ಧ ದೇವಾಲಯಗಳಿಗೆ ಭೇಟಿ ನೀಡಿ ಬುದ್ಧನನ್ನು ಸ್ಮರಿಸುತ್ತಾರೆ. ಉಪವಾಸ ಆಚರಿಸುತ್ತಾ ಬುದ್ಧನ ಧ್ಯಾನದಲ್ಲಿ ಇಡೀ ದಿನ ಕಳೆಯುತ್ತಾರೆ. ಇದರಿಂದ ಮನಸ್ಸಿಗೆ ಶಾಂತಿ ಜೊತೆಗೆ ಕೆಟ್ಟ ಯೋಚನೆಗಳೆಲ್ಲ ದೂರವಾಗಿ ಮನಸ್ಥಿತಿ ಹತೋಟಿಯಲ್ಲಿರುವಂತೆ ಧ್ಯಾನಸ್ಥರಾಗುತ್ತಾ..!

# ಕೆ.ಶಿವು.ಲಕ್ಕಣ್ಣವರ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here