ಶಹಾಬಾದ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನಿಧನದಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಎಐಡಿವಾಯ್ಓ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ.ಎಸ್.ಹೆಚ್ ಹೇಳಿದರು.
ಅವರು ಬುಧವಾರ ನಗರದ ಎಐಡಿವಾಯ್ಓ ಕಾರ್ಯಾಲಯದಲ್ಲಿ ಆಯೋಜಿಸಲಾದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಎಚ್.ಎಸ್.ದೊರೆಸ್ವಾಮಿಯವರು ಎಲ್ಲಾ ಚುಳುವಳಿಗಳ ನೇತಾರರಿಗೆ ಶಕ್ತಿಯಾಗಿದ್ದರು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ದಿಟ್ಟತನದ ವ್ಯಕ್ತಿಯಾಗಿದ್ದರು. ನ್ಯಾಯಕ್ಕಾಗಿ ಸಾಮಾಜಿಕ ಹಕ್ಕುಗಳಿಗಾಗಿ ಎಂದು ರಾಜಿಯಾಗದೇ ಹೋರಾಟಕ್ಕಿಳಿಯುವ ಮಹಾನ ಚೇತನ ಇಂದು ನಮ್ಮಿಂದ ಕಣ್ಮರೆಯಾಗಿದ್ದು ನುಂಗಲಾರದ ತುತ್ತಾಗಿದೆ.ಅವರ ಆದರ್ಶಗಳು ಇಂದಿನ ಎಲ್ಲಾ ಚುಳುವಳಿಯ ನೇತಾರರಿಗೆ, ಕಾರ್ಯಕರ್ತರಿಗೆ, ರಾಜಕೀಯ ಮುಖಂಡರಿಗೆ ದಾರಿದೀಪವಾಗಬೇಕಿದೆ ಎಂದರು.
ಶಿವಕುಮಾರ ಕುಸಾಳೆ ಮಾತನಾಡಿ, ಇಂತಹ ಇಳಿವಯಸ್ಸಿನಲ್ಲಿಯೂ ಕೂಡ ಹೋರಾಟಗಳಲ್ಲಿ ದುಮುಕುತ್ತಿದ್ದರು. ಅವರ ಹೋರಾಟದ ಶಕ್ತಿ ಯುವಕರಿಗೆ ಪ್ರೇರಣೆಯಾಗಿತ್ತು ಎಂದು ಹೇಳಿದರು. ರಾಜೇಂದ್ರ ಅತನೂರ, ನೀಲಕಂಠ.ಎಮ್.ಹುಲಿ, ಗುಂಡಮ್ಮ ಮಡಿವಾಳ, ಮಹಾದೇವಿ ಮಾನೆ,ತುಳಜಾರಾಮ.ಎನ್.ಕೆ, ರಮೇಶ ದೇವರ ಇತರರು ಇದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…