ಬಿಸಿ ಬಿಸಿ ಸುದ್ದಿ

17 ನೇಯ ಶತಮಾನದ ಕೊನೆಯ ವಚನಕಾರ ಷಣ್ಮುಖ ಶಿವಯೋಗಿಗಳ ಜಾತ್ರೆ ರದ್ದು

ಜೇವರ್ಗಿ:- ಇದೇ ತಿಂಗಳು 30 ಮತ್ತು 31 ನೇಯ ತಾರೀಖು ನಡೆಯಬೇಕಿದ್ದು 17 ನೇಯ ಶತಮಾನದ ಕೊನೆಯ ವಚನಕಾರರು, ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳ ಜಾತ್ರಾಮತೋತ್ಸವ ರದ್ದುಗೊಳಿಸಲಾಗಿದೆ ಎಂದು ಟ್ರಸ್ಟ್ ಕಮಿಟಿ ಮತ್ತು ಊರಿನ ಪ್ರಮುಖರು ಮತ್ತು ಹಿರಿಯರು ಎಲ್ಲಾ ಟ್ರಸ್ಟ್‌ ಸದಸ್ಯರು ಸೇರಿ ಈ ಬಾರಿ ಜಾತ್ರೆ ರದ್ದುಗೊಳಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಟ್ರಸ್ಟ್ ಕಾರ್ಯದರ್ಶಿ, ಕಲಬುರಗಿ ವಿವಿ ಮಾಜಿ ಸಿಡಿಕೇಟ್ ರಾದ ಸಂಗನಗೌಡ ಪಾಟೀಲ ಗುಳ್ಯಾಳ, ನ್ಯಾಯವಾದಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರದ ನಿಯಮ ಮತ್ತು ಕಲಂ 144 ಜಾರಿಯಲ್ಲಿದೆ. ಸಾರ್ವಜನಿಕರು ಸೇರುವಂತಿಲ್ಲ, ಕೋವಿಡ್ 19, ಮಹಾಮಾರಿ ರೋಗ ಇಡೀ ದೇಶ,ರಾಜ್ಯ, ಜಿಲ್ಲೆ ಮತ್ತು ತಾಲೂಕು ಗ್ರಾಮದಲ್ಲಿ ಇರುವುದರಿಂದ ಈ ಮಹಾಮಾರಿ ರೋಗ ತೊಲಗಿಸಲು ಸರ್ಕಾರ ಮತ್ತು ಸಾರ್ವಜನಿಕರು ಸಹಕರಿಸುವುದು ಅತ್ಯಗತ್ಯವಾಗಿದೆ.

ಈ ಬಾರಿ ಮಠದ ಜಾತ್ರೆ ರದ್ದುಗೊಂಡಿದೆ. ಮಠದ ಅಪಾರ ಭಕ್ತರು ಇರುವುದರಿಂದ ತಮ್ಮ ತಮ್ಮ ಮನೆಯಲ್ಲಿ ಸರ್ಕಾರದ ನಿಯಮಗಳು ಮತ್ತು ಕೋರೋನಾ ನಿಯಮಗಳು ಪಾಲಿಸಿ ತಾವು ತಮ್ಮ ಮನೆಯಲ್ಲಿ ಚರಚಕ್ರವರ್ತಿ, ವಚನಕಾರ ಶ್ರೀಷಣ್ಮುಖ ಶಿವಯೋಗಿಗಳ ಭಾವಚಿತ್ರ ಮತ್ತು ವಚನ ಸಂಪುಟ ಇಟ್ಟು ಪೂಜೆ ಸಲ್ಲಿಸುವ ಮುಖಾಂತರ ಶ್ರೀ ಗಳ ಸ್ಮರಣೆ ಮಾಡುವುದರೊಂದಿಗೆ ಜಾತ್ರೆ ಆಚರಿಸುವುವಂತೆ ಮನವಿ ಮಾಡಿದರು.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

4 hours ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

6 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

6 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

6 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

6 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

6 hours ago