ಶಹಾಬಾದ:ದಿಲ್ಲಿಯಲ್ಲಿ ಕೃಷಿ ಮಸೂದೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಹೋರಾಟ ಪ್ರಾರಂಭವಾಗಿ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮೇ ೨೬ ರಂದು ಕರಾಳ ದಿನಾಚರಣೆ ಭಾಗವಾಗಿ ಬುಧವಾರ ಕಲಬುರಗಿ ಕಿಸಾನ ಮೋರ್ಚಾ ತಾಲೂಕಿನ ಹೊನಗುಂಟಾ ಗ್ರಾಮದಲ್ಲಿ ರೈತರ ಹೋರಾಟಕ್ಕೆ ಬೆಂಬಲಿಸಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಸರಕಾರದ ರೈತ ವಿರೋಧಿ ಕಾಯ್ದೆಗಳು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ ಮಾತನಾಡಿ, ಕಳೆದ ಆರು ತಿಂಗಳಿನಿಂದ ದಿಲ್ಲಿಯಲ್ಲಿ ನಿರಂತರವಾಗಿ ಪ್ರಧಾನಿ ಮೋದಿ ಮೇಲೆ ಆಸೆ ಭಾವನೆ ಇಟ್ಟುಕೊಂಡಿದ್ದೆವು.ಆದರೆ ರೈತ ವಿರೋಧಿ ಕಾಯ್ದೆ ತಂದು ರೈತರಿಗೆ ದಕ್ಕೆ, ಆತಂಕ ತರುವ ಕೆಲಸ ಮಾಡಿದ್ದಾರೆ.ರೈತರ ಹೋರಾಟದಲ್ಲಿ ಹಲವಾರು ಜನರು ಜೀವ ಕಳೆದುಕೊಂಡರು ಸರಕಾರ ಮಾತ್ರ ಕಣ್ಣು ತೆರೆದು ನೋಡಿಲ್ಲ.ಸರಕಾರಕ್ಕೆ ಕರುಣೆ, ಮಾನ, ಮರ್ಯಾದೆ ಇದ್ದರೆ ರೈತರ ಪರವಾಗಿ ನಿಲ್ಲಬೇಕಾಗಿತ್ತು.ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆ ಕೆಲಸವನ್ನು ಮಾಡಿಲ್ಲ.ಆದ್ದರಿಂದ ರೈತ ವಿರೋಧಿ ಬಿಜೆಪಿ ಸರಕಾರಕ್ಕೆ ಇಂದು ಕಪ್ಪ ಬಟ್ಟೆ ಪ್ರದರ್ಶಿಸಿದ್ದು, ಮುಂದೆ ಒಂದು ದಿನ ರೈತರು ಬುದ್ಧಿ ಕಲಿಸುತ್ತಾರೆ.ಕಾರಣ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ವಿಶ್ವರಾಜ ಫೀರೋಜಾಬಾದ ಹಾಗೂ ಶರಣು ಬನ್ನೇರ್ ಮಾತನಾಡಿ, ರೈತರಿಗೆ ಬೇಡವಾದ ಮಸೂದೆಗಳನ್ನು ಜಾರಿಗೆ ತಂದು ರೈತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ.ರೈತರು ಹೋರಾಟದಿಂದ ಹಿಂದೆ ಸರಿಯುವುದಿಲ್ಲ.ದೇಶಾದ್ಯಂತ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.ಇನ್ನಾದರೂ ಸರಕಾರ ಗಮನಹರಿಸಿ ಸಮಸ್ಯೆಗಳನ್ನು ವಿಚಾರ ಮಾಡಿ ಮಸೂದೆಗಳನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಕಾರ್ಯಕರ್ತರು ಹಾಗೂ ಇತರರು ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…