ಜೇವರ್ಗಿ: ತಾಲೂಕಿನ ಮುಖ್ಯರಸ್ತೆ ಸೇರಿದಂತೆ ವಿವಿಧ ಬಡಾವಣೆಯಲ್ಲಿ ಕೋವಿಡ್ 19 ನಿಯಮ ಉಲ್ಲಂಘನೆ ಮಾಡಿದ ಜನರಿಗೆ ಪುರಸಭೆ ಮುಖ್ಯ ಅಧಿಕಾರಿ ಶರಣಯ್ಯ ಸ್ವಾಮಿ ಹಿರೇಮಠ ದಂಡ ವಿಧಿಸಿದರು.
ಜಿಲ್ಲಾಧಿಕಾರಿಗಳ ಆದೇಶದಂತೆ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂಕೂಡ ಸಾರ್ವಜನಿಕ ಸ್ಥಳಗಳಲ್ಲಿ ಮುಖಕ್ಕೆ ಮಾಸ್ಕ್ ಧರಿಸದೆ ಓಡಾಡುತ್ತಿರುವ ವ್ಯಕ್ತಿಗಳಿಗೆ ದಂಡ ವಿಧಿಸಿದರು. ದಿನೇ ದಿನೇ ತೀವ್ರವಾಗಿ ಹರಡುತ್ತಿರುವ ಮಹಾಮಾರಿಯನ್ನು ತಡೆಯಲು ಇಡೀ ದೇಶವೇ ಸತತವಾಗಿ ಪ್ರಯತ್ನಪಡುತ್ತಿದೆ. ಆದರೆ ಸಾರ್ವಜನಿಕರು ಆದೇಶವನ್ನು ಉಲ್ಲಂಘನೆ ಮಾಡಿ ಕೆಲವು ಜನರು ಮಾಸ್ಕ್ ಧರಿಸದೆ ತಮ್ಮ ದಿನನಿತ್ಯ ಚಟುವಟಿಕೆ ನಡೆಸುತ್ತಿದ್ದಾರೆ.
ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಿದರು ಕೂಡ ತಲೆಕೆಡಿಸಿಕೊಳ್ಳದ ಸಾರ್ವಜನಿಕರು ತಮ್ಮ ಕೆಲಸವನ್ನು ತಾವೇ ಮಾಡುತ್ತಿದ್ದಾರೆ. ಸರಕಾರದ ಜೊತೆ ಸಾರ್ವಜನಿಕರು ಕೈ ಜೋಡಿಸಿದಾಗ ಮಾತ್ರ ಈ ಮಹಾಮಾರಿ ದೇಶದಿಂದ ಹೊಡೆದೋಡಿಸಲು ಸಾಧ್ಯವಾಗುತ್ತದೆಎಂದು ಹೇಳಿದರು.
ಇಲ್ಲಿನ ಬಸ್ ನಿಲ್ದಾಣದ ಸಜ್ಜನ್ ಸೂಪರ್ ಬಜಾರ್ ಇಲ್ಲಿಗೆ ಆಗಮಿಸಿದ ದೂರದ ಹಳ್ಳಿಯ ವ್ಯಕ್ತಿಯೋರ್ವನು ಊರಿಗೆ ಹೋಗಲು ಹಣವಿಲ್ಲ ನನ್ನ ಹತ್ತಿರ Rs.80 ಮಾತ್ರ ಇದೆ ಎಂದಾಗ ,ಅವರಿಗೆ ಕೇವಲ 80 ರೂಪಾಯಿ ಮಾತ್ರ ಮಾಸ್ಕ್ ಬರೆದಿದ್ದಕ್ಕಾಗಿ ದಂಡದ ಹಣವನ್ನು ವಸೂಲಿ ಮಾಡಿದ್ದಾರೆ.
ಪುರಸಭೆ ವ್ಯಾಪ್ತಿಯಲ್ಲಿ ಬರುವ 23 ವಾರ್ಡ್ ಗಳಲ್ಲಿ ಸಂಪೂರ್ಣ ಸನಿಟೇಶನ್ ಮಾಡಿಸುವ ಮೂಲಕ ಕರೋನ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದಾರೆ.
ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರಾದ ಮುನೇಶ್ ಹುಲಿಮನಿ ಹಾಗೂ ತಹಸಿಲ್ ಕಾರ್ಯಾಲಯದ ರಮೇಶ್ ಹಾಗೂ ಪುರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…