ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ:ಮಹೇಶ್ವರಿ ವಾಲಿ

ಚಿತ್ತಾಪುರ:ಸಮಾಜ ಸೇವೆ ಒಂದು ಪುಣ್ಯದ ಕೆಲಸ,ದುಡ್ಡು ಗಳಿಸುವುದೇ ದೊಡ್ಡ ಸಾಧನೆ ಅಲ್ಲಾ ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ ಸಂಕಷ್ಟದಲ್ಲಿ ಇರುವ ಜನರಿಗೆ ಸಹಾಯ ಮಾಡಿ,ನಿರ್ಗತಿಕರಿಗೆ ಹಾಗೂ ನೋಂದವರಿಗೆ ಸಹಾಯ ಮಾಡುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ ಎಂದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಲಬುರ್ಗಿಯ ಸಮಾಜ ಸೇವಕಿ ಮಹೇಶ್ವರಿ ವಾಲಿ ಅವರು ಕರೋನಾ ವಾರಿಯರ್ಸ್ ಗೆ ಹಾಗೂ ರೋಗಿಗಳಿಗೆ ಟೋಸ್ಟ್ ಹಾಗೂ ಹಣ್ಣುಗಳನ್ನು ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಜನರು ಕೇವಲ ಹಣ ಗಳಿಕೆಗೆ ಮಾತ್ರ ಸೀಮಿತರಾಗಿರುವುದರ ಜೊತೆಗೆ ಸ್ವಾರ್ಥಿಗಳಾಗಿದ್ದಾರೆ.ತಾವು ಮತ್ತು ತಮ್ಮ ಕುಟುಂಬ ಅಷ್ಟೇ ಸೀಮಿತವಾಗಿದ್ದಾರೆ. ಕರೋನಾ ಸಂಕಷ್ಟದ ಸಂದರ್ಭದಲ್ಲಿ ಸಮಾಜ ಸೇವೆ ಮಾಡುವುದು ಅತಿ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಕರೋನಾ ನಿಯಂತ್ರಣದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜನರ ಪ್ರಾಣ ಉಳಿಸುವ ಕೆಲಸ ಮಾಡಬೇಕಿದೆ.ಕರೋನಾ ನಿಯಂತ್ರಣದಲ್ಲಿ ರಾಜಕೀಯ ಮಾಡದೆ,ಮಾಡುವ ಕೆಲಸದಲ್ಲಿ ಶ್ರದ್ಧೆ,ನಿಷ್ಠೆಯಿಂದ ಮಾಡಬೇಕಾಗಿದೆ.ಶ್ರೀಮಂತರು ತಮ್ಮ ಅಕ್ಕ-ಪಕ್ಕದಲ್ಲಿ ಇರುವ ಬಡವರಿಗೆ ನಿರ್ಗತಿಕರಿಗೆ ಸಹಾಯ ಮಾಡುವುದರ ಮೂಲಕ ನಮ್ಮ ಕೈಲಾದಷ್ಟು ಸಮಾಜಸೇವೆಯನ್ನು ಮಾಡಬೇಕಾಗಿದೆ.ನಾವು ನೀವು ಎನ್ನದೆ ಸರ್ಕಾರದ ಮೇಲೆ ಅವಲಂಬಿತವಾಗದೆ.ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಈ ಕರೋನಾ ನಿಯಂತ್ರಣ ಮಾಡಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕಂಬಳೇಶ್ವರ ಮಠದ ಸೋಮಶೇಖರ ಶಿವಾಚಾರ್ಯರು ಕರೋನಾ ಮಹಾಮಾರಿಗೆ ಎಷ್ಟೋ ಕುಟುಂಬಗಳು ತುತ್ತು ಅನ್ನ ಸಿಗದೆ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿವೆ ಇಂತಹ ಸಂದರ್ಭದಲ್ಲಿ ದುಡ್ಡಿನ ಶ್ರೀಮಂತಿಕೆ ಮುಖ್ಯವಲ್ಲ,ಹೃದಯ ಶ್ರೀಮಂತಿಕೆ ಮುಖ್ಯವಾಗಿದ್ದು ಸಂಕಷ್ಟದಲ್ಲಿ ಇರುವ ಕುಟುಂಬಗಳಿಗೆ ಸಹಾಯ ಮಾಡಬೇಕಾಗಿದೆ ಎಂದರು.

ಹೊಟ್ಟೆಗೆ ಅನ್ನ ಇರದೇ ಎಷ್ಟೋ ಕುಟುಂಬಗಳು ಬಿದಿ ಪಾಲಾಗಿವೆ ಇಂತಹ ಸಂದರ್ಭದಲ್ಲಿ ಅಂತವರಿಗೆ ಸಹಾಯ ಮಾಡುವ ಕೆಲಸ ಮಾಡಬೇಕಿದೆ.ಇಂತಹ ಸಂಕಷ್ಟದ ಸಮಯದಲ್ಲಿ ಹಸಿವರರಿಗೆ ಅನ್ನ ನೀಡುವ ಕೆಲಸ ಮಾಡಿದರೆ ಅಂತವರು ದೇವರ ಪ್ರೀತಿಗೆ ಪಾತ್ರರಾಗುತ್ತಾರೆ ಎಂದು ಹೇಳಿದರು. ಸುಮಾರು ಒಂದು ವರ್ಷದಿಂದ ಕಾಡುತ್ತಿರುವ ಕರೋನಾ ಮಹಾಮಾರಿಯಲ್ಲಿ ಅನೇಕರ ಜೀವನ ಬೀದಿಪಾಲಾಗಿವೆ.ಇಂತಹ ಸಂದರ್ಭದಲ್ಲಿ ಬಡವರ ನಿರ್ಗತಿಕರ ಸಹಾಯ ಮಾಡಲು ಮುಂದಾಗಿರುವ ಇವರ ಮಹತ್ತರ ಕಾರ್ಯ ಇತರರಿಗೆ ಮಾರ್ಗದರ್ಶನವಾಗಿದೆ ಎಂದರು.

ಕೋವಿಡ್-19 ಎರಡನೇ ಅಲೆಯಲ್ಲಿ ಪ್ರತಿ ದಿನ ಸುಮಾರು 250 ಬಡ ನಿರ್ಗತಿಕರಿಗೆ ದಿನ ಅನ್ನ ಸಂತರ್ಪಣೆ ಮಾಡುವ ಮೂಲಕ ತಮ್ಮ ಸೇವೆಯನ್ನು ಸಲ್ಲಿಸುತ್ತಿರುವ ಮಹೇಶ್ವರಿ ವಾಲಿ ಅವರು ಶುಕ್ರವಾರ ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಟೋಸ್ಟ್ ಹಾಗೂ ಹಣ್ಣುಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಚಂದ್ರಶೇಖರ ಕಾಶಿ,ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್,ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಾಯಬಣ್ಣ ಕಾಶಿ,ಬಾಬು ಕಾಶಿ,ಲಖನ್ ಸಿಂಗ್ ರಾಜಪೂತ್,ನಾಗರಾಜ ರೇಷ್ಮಿ,ಸಂತೋಷ ಕಲಾಲ್,
ಮಧುಮತಿ ಕೋಟರ್ಕಿ,ಪವನ್ ಲೋಮಟೆ,ಆಸ್ಪತ್ರೆಯ ಸಿಬಂದ್ದಿಗಳು ಹಾಗೂ ಮತ್ತಿತರರು ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420