ಚಿತ್ತಾಪುರ:ಕರೋನಾ ಎರಡನೆಯ ಅಲೆಯಿಂದ ವೃತ್ತಿಪರ ಛಾಯಾಗ್ರಹಕರಿಗೆ ಜೀವನ ನಡೆಸಲು ತೀರ ಸಂಕಷ್ಟವಾಗಿದೆ ಅದಕ್ಕಾಗಿ ಶೀಘ್ರವೇ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ತಹಶೀಲ್ದಾರ ಉಮಾಕಾಂತ ಹಳ್ಳೆ ಅವರ ಮೂಲಕ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತಾಲೂಕಾ ಫೋಟೋ ಮತ್ತು ವಿಡಿಯೋ ಗ್ರಾಫರ್ ಅಸೋಸಿಯೇಷನ್ ವತಿಯಿಂದ ಮನವಿ ಪತ್ರ ಸಲ್ಲಿಸಿದ್ದರು.
ತಮ್ಮ ಸ್ವತಃ ಜೀವನದ ದಾರಿಯಲ್ಲಿ ಯಶಸ್ಸನ್ನು ಕಾಣಲು ಹಲವಾರು ನಿರುದ್ಯೋಗ ಯುವಕರು ಸ್ವಉದ್ಯೋಗಕ್ಕೆ ಛಾಯಾಗ್ರಕರಾಗಿ ತಮ್ಮ ವೃತ್ತಿಯನ್ನು ಆರಂಭಿಸಿದ್ದಾರೆ.ಆದರೆ ಕೋವಿಡ್-19 ರ ಎರಡನೆಯ ಅಲೆಯಿಂದ ಅವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕರೋನಾ ಎರಡನೇಯ ಅಲೆಯ ನಿಯಂತ್ರಣದ ನಿಯಮದ ಪ್ರಕಾರ ಎಲ್ಲಾ ವೇದಿಕೆಯ ಕಾರ್ಯಕ್ರಮ,ಮನೋರಂಜನೆ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಲಾಗಿದೆ.ಇದರಿಂದ ಒಂದು ವರ್ಷದಿಂದ ಯಾವುದೇ ಕಾರ್ಯಕ್ರಮಗಳು ಇಲ್ಲಿದೆ ಛಾಯಾಗ್ರಹಕರು ತೀರ ಸಂಕಷ್ಟದಲ್ಲಿ ಇದ್ದಾರೆ ಜೊತೆಗೆ 2021ರ ಅಂತ್ಯದವರೆಗೂ ಯಾವುದೇ ಮದುವೆ ಮತ್ತು ಇತರ ಕಾರ್ಯಕ್ರಮಗಳು ಸಿಗುವುದಿಲ್ಲ ಹೀಗಾಗಿ ಕುಟುಂಬದ ನಿರ್ವಹಣೆ,ಮನೆಯ ಹಾಗೂ ಅಂಗಡಿಯ ಬಾಡಿಗೆ,ವಿದ್ಯುತ್ ಬಿಲ್ ಹಾಗೂ ಸಾಲದ ಹೊರೆ ಕಷ್ಟಕರವಾಗಿದೆ ಇದನ್ನು ಅರಿತುಕೊಂಡು ಸರ್ಕಾರ ಕೂಡಲೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷ ವಿಜಯಕುಮಾರ ರಾಠೋಡ, ಪದಾಧಿಕಾರಿಗಳಾದ ರವೀಂದ್ರ.ವಿ ಪಂಚಾಳ,ಅಂಬು ಚವ್ಹಾಣ್, ವೆಂಕಟೇಶ ಬಳಿಚಕ್ರ, ಮಧುಸೂಧನ ಕಾಶಿ,ಶಿವರಾಜ್ ಇನ್ನಿತರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…