ಶಹಾಬಾದ: ತಾಲೂಕಿನಲ್ಲಿ ಶನಿವಾರ ಸಾಯಂಕಾಲ ಗುಡುಗು- ಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು.ಇದರಿಂದ ಕಾದು ಹಂಚಿನಂತಾಗಿದ್ದ ಧರೆಯನ್ನು ಮಳೆ ತಾಂಪಾಗಿಸಿತು.
ಸುಮಾರು ದಿನಗಳಿಂದ ಬಿಸಿಲಿನ ಬೇಗೆಗೆ ಬೆಂದ ಜನರು ವಾತವಾರಣ ತಾಂಪಾಗಿದ್ದರಿಂದ ನಿಟ್ಟುಸಿರು ಬಿಡುವಂತಾಯಿತು.
ನಗರದ ಬಸವೇಶ್ವರ ವೃತ್ತದಿಂದ ಶಾಸ್ತ್ರಿ ವೃತ್ತದವರೆಗಿನ ರಸ್ತೆ ಸಂಪೂರ್ಣ ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಯಿತು.ಅಲ್ಲದೇ ನಗರದ ಕೆಲವು ಪ್ರದೇಶಗಳಲ್ಲಿ ಚರಂಡಿ ತುಂಬಿಕೊಂಡು ರಸ್ತೆಯ ಮೇಲೆ ನೀರು ಹರಿದ ಪರಿಣಾಮ ಪ್ಲಾಸ್ಟಿಕ್, ಕಸ-ಕಡ್ಡಿ ರಸ್ತೆಯ ಆವರಿಸಿಕೊಂಡಿತು.
ನಗರದ ನಿಜಾಮ ಬಜಾರ ಪ್ರದೇಶದಲ್ಲಿ ಚರಂಡಿ ನಿರ್ಮಾಣವಾಗದಿರುವುದರಿಂದ ಮಳೆ ನೀರು ಸಂಪೂರ್ಣ ಬಡಾವಣೆಯ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಜಲಾವೃತಗೊಂಡು ಸಾರ್ವಜನಿಕರು ಮನೆಯಿಂದ ಹೊರಬಾರದಂತಾಯಿತು. ಇನ್ನು ಕೆಲವು ಪ್ರದೇಶಗಳಲ್ಲಿ ಗಿಡ ಮರಗಳು ಬಿದ್ದಿರುವುದು ಕಂಡು ಬಂದಿತು.
ಸುಮಾರು ಎರಡು ವರ್ಷಗಳಿಂದ ಚರಂಡಿ ನಿರ್ಮಾಣ ಮಾಡುತ್ತೆವೆ ಎಂದು ತಗ್ಗು ತೋಡಿ ಕಾಂಗಾರಿ ಮಾಡದೇ ಹೋಗಿದ್ದಾರೆ.ಅಲ್ಲದೇ ಇನ್ನೊಂದು ಬದಿಯಲ್ಲಿ ಕಳಪೆ ಹಾಗೂ ಅವೈಜ್ಞಾನಿಕ ಚರಂಡಿ ನಿರ್ಮಾಣ ಮಾಡಿರುವುದರಿಂದ ರಸ್ತೆಯ ಮೇಲೆ ನೀರು ನಿಲ್ಲುವಂತಾಗಿದೆ. ನಗರದ ಮುಖ್ಯ ರಸ್ತೆ ಸಂಪೂರ್ಣ ಆವರಿಸಿಕೊಂಡು ಚರಂಡಿ ನೀರು ರಸ್ತೆಯ ಮೇಲೆ ಹರಿದಾಡುತ್ತಿರುವುದರಿಂದ ನಗರಸಭೆಯ ಅಧಿಕಾರಿಗಳಿಗೆ ಸಾರ್ವಜನಿಕರು ಹಿಡಿಶಾಪ ಹಾಕಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…