ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಕಲಬುರಗಿವತಿಯಿಂದ ನಿರ್ಮಿಸುತ್ತಿರುವ ವೀರಶೈವ ಲಿಂಗಾಯತ ಬಾಲಕಿಯರ ಉಚಿತ ವಸತಿ ನಿಲಯಕ್ಕೆ ಶ್ರೀ ಬಸವೇಶ್ವರ ಬ್ಯಾಂಕ್ನ ಅಧ್ಯಕ್ಷ ಚಂದ್ರಶೇಖರ ತಳ್ಳಳ್ಳಿ ಹಾಗೂ ಉಪಾಧ್ಯಕ್ಷ ಎಂ.ಡಿ ಪಾಟೀಲರು ಐದು ಲಕ್ಷ ರೂಪಾಯಿಗಳ ದೇಣಿಗೆಯನ್ನು ಚೆಕ್ ಮುಖಾಂತರ ವಸತಿ ನಿಲಯ ಕಟ್ಟಡದ ಉಸ್ತುವಾರಿ ಅಧ್ಯಕ್ಷ ಶಾಸಕರಾದ ಶರಣಬಸಪ್ಪ ದರ್ಶನಾಪುರ ಹಾಗೂ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿಯವರಿಗೆ ನೀಡಲಾಯಿತು.
ದೇಣಿಗೆ ಚೆಕ್ನ್ನು ಸ್ವೀಕರಿಸಿ ಮಾತನಾಡಿದ ಶಾಸಕ ಶರಣಬಸಪ್ಪ ದರ್ಶನಾಪುರ ಅವರು, ಬಸವೇಶ್ವರ ಬ್ಯಾಂಕ್ ನ ಅಧ್ಯಕ್ಷರಿಗೆ, ಪದಾಧಿಕಾರಿಗಳಿಗೆ ಹಾಗೂ ಎಲ್ಲಾ ಸದಸ್ಯರಿಗೆ ತುಂಬು ಹೃದಯದ ಕೃತಜ್ಞತೆ ಹೇಳಿದರು. ಇದೇ ರೀತಿಯ ಧನಸಹಾಯ ಸಮಾಜದ ಬಾಂಧವರು ನೀಡಬೇಕೆಂದು ಮನವಿ ಮಾಡಿದರು.
ನಂತರ ಮಾತನಾಡಿದ ಚಂದ್ರಶೇಖರ ತಳ್ಳಳ್ಳಿ, ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆಯವರ ಮಾರ್ಗದರ್ಶನದಲ್ಲಿ ಮೋದಿ ಅಣ್ಣನವರು ಉಚಿತ ಬಾಲಕಿಯರ ವಸತಿ ನಿಲಯ ನಿರ್ಮಿಸುತ್ತಿರುವುದು ನಮಗೆಲ್ಲಾ ತುಂಬಾ ಹೆಮ್ಮೆಯ ವಿ?ಯ. ಈ ಭಾಗದಲ್ಲಿ ಸಮಾಜದವತಿಯಿಂದ ಮೊದಲ ಬಾಲಕಿಯರ ವಸತಿ ನಿಲಯ ಇದಾಗಿದೆ.ಇದು ನಮ್ಮ ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟಿನ ಶಕ್ತಿಗೆ ಸಾಕ್ಷಿಯಾಗಲಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ವೈಯಕ್ತಿಕ ಹಾಗೂ ಬ್ಯಾಂಕ್ವತಿಯಿಂದ ಹೆಚ್ಚಿನ ಸಹಾಯ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯರಾದ ಧರ್ಮಪ್ರಕಾಶ ಪಾಟೀಲ, ಆರ್ ಜಿ ಶೆಟಗಾರ್, ಸಿದ್ರಾಮಪ್ಪ ಪಾಟೀಲ, ಶಿವಲಿಂಗಪ್ಪ ಬಂಡಕ , ಮಹಾಸಭಾದ ಶ್ರೀಮತಿ ಜ್ಯೋತಿ ಮರಗೋಳ ಹಾಗೂ ವಸತಿ ನಿಲಯದ ಉಸ್ತುವಾರಿ ಸದಸ್ಯರಾದ , ಸೋಮಶೇಖರ ಹಿರೇಮಠ, ಭೀಮಾಶಂಕರ ಮೀಟೇಕಾರ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…