ಚಿತ್ತಾಪುರ: ಕರೋನಾ 2ನೇ ಅಲೆಯು ತೀವ್ರವಾಗಿ ಹರಡುತಿರುವುದರಿಂದ ಜಿಲ್ಲಾದ್ಯಂತ ಕಟ್ಟು ನಿಟ್ಟಾದ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಪಟ್ಟಣಕ್ಕೆ ಮಂಗಳವಾರ ದಿಡೀರ್ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್ ಅವರು ನಾಗಾವಿ ವೃತ ದಿಂದ ಕಾಲ್ನಡಿಗೆಯ ಮೂಲಕ ತೆರಳಿದರು.ರೈಲ್ವೆ ನಿಲ್ದಾಣ, ತಹಶೀಲ್ದಾರ ಕಛೇರಿ,ಬಸವೇಶ್ವರ ವೃತ್ತ ಮತ್ತು ಲಾಡ್ಜಿಂಗ್ ಕ್ರಾಸ್ ರೌಂಡ್ ಹಾಕಿದರು.
ಜಿಲ್ಲೆಯಾದ್ಯಂತ ಕಟ್ಟು ನಿಟ್ಟಾದ ಲಾಕ್ ಡೌನ್ ಜಾರಿಯಲ್ಲಿದ್ದು, ಜನರು ಅದಕ್ಕೆ ಸಹಕಾರ ನೀಡಬೇಕು.ಅನಾವಶ್ಯಕವಾಗಿ ಓಡಾಡಬಾರದು ಎಂದರು.
ಕೆಲವು ಪಟ್ಟಣಗಳಿಗೆ ಭೇಟಿ ನೀಡಿದ್ದು ಇತರ ಪಟ್ಟಣಗಳಿಗಿಂತ ಚಿತ್ತಾಪುರನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿ ಕಟಿಂಗ್ ಹಾಕುವುದರ ಮೂಲಕ ಕಟ್ಟು ನಿಟ್ಟಾದ ಲಾಕ್ ಡೌನ್ ಮಾಡಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರು ಸಹಕಾರ ನೀಡಬೇಕು.ತುರ್ತು ಪರಿಸ್ಥಿತಿ ಇದ್ದಂತಹ ವಾಹನಗಳಿಗೆ ವಿನಾಯಿತಿ ನೀಡಿ,ಅನವಶ್ಯಕವಾಗಿ ತಿರುಗಾಡಿದವಾರ ವಾಹನಗಳನ್ನು ಯಾವುದೇ ಮುಲಾಜಿಲ್ಲದೆ ಜಪ್ತಿ ಮಾಡಿ ಎಂದು ಪೋಲಿಸ್ ರಿಗೆ ಖಡಕ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಉಮೇಶ್ ಚಿಕ್ಕಮಠ,ಸಿಪಿಐ ಕೃಷ್ಣಪ್ಪ ಕಲ್ಲದೇವರು,ಪಿಎಸ್ಐ ಮಂಜುನಾಥ ರೆಡ್ಡಿ ಮತ್ತು ಸಿಬ್ಬಂದಿಗಳಾದ ಮಹೇಶ ರೆಡ್ಡಿ,ಗುಂಡಪ್ಪಾ, ದೇವಪ್ಪಾ, ಶಾಂಲಿಪ್ಪಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…