ಶಹಾಬಾದ:ಕೋವಿಡ್ ಲಾಕಡೌನ್ ನಿಮಿತ್ತ ನಗರದಲ್ಲಿ ಜನದಟ್ಟಣೆ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬುಧವಾರ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಮಿ ಮರಿಯಮ್ ಜಾರ್ಜ ನಗರಕ್ಕೆ ಬೇಟಿ ನೀಡಿ ಪರಿಶೀಲಿಸಿದರು.
ನಗರದ ಅಂಬೇಡ್ಕರ್ ವೃತ್ತ, ನೆಹರು ವೃತ್ತ, ತ್ರಿಶೂಲ ವೃತ್ತ, ಮಜ್ಜಿದ್ ವೃತ್ತ, ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ, ತರಕಾರಿ ಮಾರುಕಟ್ಟೆ, ಬೆಂಡಿ ಬಜಾರ ಸೇರಿದಂತೆ ನಗರದ ವಿವಿಧ ಪ್ರದೇಶಗಳಿಗೆ ತೆರಳಿ ವೀಕ್ಷಿಸಿದರು.ಅಲ್ಲದೇ ತೆರಳುವ ಮಾರ್ಗ ಮಧ್ಯೆ ಮಹಿಳೆಯರಿಗೆ ಪ್ರೀತಿಯಿಂದ ಮಾತನಾಡಿಸಿ ಮಾಸ್ಕ್ ಧರಿಸುವಂತೆ ಹೇಳಿದಲ್ಲದೇ ಹತ್ತಾರು ಜನರಿಗೆ ಮಾಸ್ಕ್ನ್ನು ವಿತರಿಸಿದರು.
ಕಾಮ್ರೇಡ್ ಶಂಕರ್ ಸಹಾ ಅವರಿಗೆ ಶ್ರದ್ಧಾಂಜಲಿ
ನಗರದ ಎಲ್ಲಾ ಪ್ರದೇಶವನ್ನು ಸುತ್ತಾಡಿ ಸೂಕ್ಷ್ಮವಾಗಿ ಗ್ರಹಿಸಿ ಕೋವಿಡ್-೧೯ ನಿಯಂತ್ರಣಕ್ಕೆ ಜಾರಿ ಮಾಡಲಾದ ಲಾಕ್ಡೌನ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಅನುಷ್ಠಾನ ಮಾಡಬೇಕು.ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನದಟ್ಟಣೆ ಆಗದಂತೆ ನಿಗಾವಹಿಸಬೇಕು.ಯಾವುದೇ ಕಾರಣಕ್ಕೂ ಸಮಯ ಮೀರಿದ ಬಳಿಕ ಅಂಗಡಿಗಳನ್ನು ತೆಗೆಯದಂತೆ ನೋಡಿಕೊಳ್ಳಬೇಕು.
ಅಂಗಡಿಗಳು ಕದ್ದು ಮುಚ್ಚಿ ತೆಗೆಯುತ್ತಿದ್ದರೆ ಅಂತಹವರ ಮೇಲೆ ಕ್ರಮಕೈಗೊಳ್ಳಿ.ಅಲ್ಲದೇ ಮಾಸ್ಕ್ ಧರಿಸದವರು ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಿ. ಅನಾವಶ್ಯಕವಾಗಿ ಓಡಾಡುತ್ತಿರುವವರ ವಾಹನಗಳನ್ನು ಜಪ್ತಿ ಮಾಡಿ ಶಿಸ್ತಿನ ಕ್ರಮ ಕೈಗೊಳ್ಳಿ. ಲಾಕ್ಡೌನ್ ಸಂಪೂರ್ಣ ಯಶಸ್ವಿಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಡಿವಾಯ್ಎಸ್ಪಿ ಉಮೇಶ ಚಿಕ್ಕಮಠ, ಪಿಐ ಪ್ರದೀಪ ಕೊಳ್ಳ , ಪಿಎಸ್ಐ ತಿರುಮಲೇಶ ಕುಂಬಾರ ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…