ಕಲಬುರಗಿ: ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ರೋಡಲ್ಲಿರುವ ದೇವಸ್ಥಾನದ ಮುಂದೆ ಮಾಜಿ ರಾಜ್ಯ ಸಭಾ ಸದಸ್ಯ, ಕನ್ನಡ ಮತ್ತು ಸಂಸ್ಕೃತ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಸವರಾಜ್ ಪಾಟೀಲ್ ಸೇಡಂ ಅವರು ಔಷಧಿ ಸಿಂಪಡಣೆ ಕಾರ್ಯಾಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಅಲ್ಪಸಂಖ್ಯಾತರ ಮೊರ್ಚಾದ ಚಿಂಚೋಳಿ ತಾಲ್ಲೂಕು ಅಧ್ಯಕ್ಷರಾದ ಮಸ್ತಾನ್ ಸಾಬ್ ಮೆಡಿಕಲ್ ಸೇರಿದಂತೆ ಹಲವು ಮುಖಂಡರು ಸೇರಿದಂತೆ ಇನ್ನಿತರರು ಇದ್ದರು.