ಚಿತ್ತಾಪುರ:ತಾಲೂಕಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವು ಪ್ರಗತಿಯಲ್ಲಿದ್ದು,ವಿಶೇಷವಾಗಿ 18 ರಿಂದ 44 ವರ್ಷದ ರಾಜ್ಯ ಗುರುತಿಸಿರುವ ವಿಶೇಷ ಗುಂಪಿನ ಫಲಾನುಭವಿಗಳು,ಕರೋನಾ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತರು, ಅದ್ಯತಾ ವಲಯದವರಿಗೆ ಗುರುತಿಸಿ ಲಸಿಕೆ ನೀಡುವ ಕಾರ್ಯ ಬಿರುಸಿನಿಂದ ಸಾಗಿದೆ.
ಶುಕ್ರವಾರ ಪಟ್ಟಣದ ಕೃಷಿ ಉತ್ಪನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಅದ್ಯತಾ ವಲಯದಲ್ಲಿರುವ ವರ್ತಕರು,ಕಾರ್ಮಿಕರು,ಹಮಾಲರು,ಕಿರಾಣಾ ಅಂಗಡಿಯವರು, ಬೀದಿ ಬದಿ ವ್ಯಾಪಾರಿಗಳಾದ ತರಕಾರಿ,ಹಣ್ಣು ಮಾರುವರು ಸುಮಾರು 120ಕ್ಕೂ ಹೆಚ್ಚು ಜನರು ಲಸಿಕೆಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ತಾಲೂಕ ವೈದ್ಯಾಧಿಕಾರಿ ದೀಪಕ್ ಪಾಟಿಲ್ ಅವರು ಮಾತನಾಡಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ಪಡೆದುಕೊಂಡು ಸಾರ್ವಜನಿಕರು ಸಹಕಾರ ನೀಡಬೇಕು ,ಲಸಿಕೆ ಪಡೆದುಕೊಂಡವರು ಕೂಡ ಕೋವಿಡ್-19ನ ನಿಯಮಗಳನ್ನು ಪಾಲನೆ ಮಾಡಬೇಕು ಅತಿ ಅವಶ್ಯಕತೆ ಇದ್ದಾಗ ಮಾತ್ರ ಮನೆಯಿಂದ ಹೊರಗೆ ಬರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ,ಉತ್ಪನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್, ಕಾರ್ಯದರ್ಶಿ ಸವಿತಾ ಗೋಣಿ,ವರ್ತಕರ ಸಂಘದ ಅಧ್ಯಕ್ಷ ಅಣ್ಣಾರಾವ ಪಾಟೀಲ್ ಮೂಡಬುಳ ,ಆರೋಗ್ಯ ಸಮಿತಿಯ ಸದಸ್ಯ ವೀರಣ್ಣಾ ಸುಲ್ತಾನಪುರ್,ಚಂದ್ರಶೇಖರ ಸಾತನೂರ್,ನಾಗರಾಜ ರೇಷ್ಮಿ,ಶರಣಬಸಪ್ಪ ಸಾತನೂರ್ ಇನ್ನಿತರರಿದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…