ಕಲಬುರಗಿ: ವಿಶೇಷಚೇತನರ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಬಹಳ ಮಹತ್ವದ್ದಾಗಿದೆ. ಶಿಕ್ಷಣದ ಜೋತೆ ಜೋತೆಗೆ ಯುವಕರು ತಮ್ಮ ಪ್ರತಿಭೆಗೆ ತಕ್ಕಂತೆ ವಿವಿಧ ರೀತಿಯ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಳ್ಳಬಹುದು.
ವಿಶೇಷಚೇತನ ಮಕ್ಕಳಲ್ಲಿ ಇರುವ ಅಭೂತಪೂರ್ವ ಪ್ರತಿಭೆಯನ್ನು ಹೊರ ಹಾಕಲು ಅವಕಾಶಗಳ ಅಗತ್ಯವಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನರ ಏಳಿಗೆಗಾಗಿ ಸೂಕ್ತ ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ ಮತ್ತು ವಿಶೇಷಚೇತನರ ಕ್ರೀಡೆಗಳಿಗೆ ಹಿಚ್ಚಿನ ಪ್ರಾಶಸ್ತ್ಯ ನೀಡುವುದರ ಜೋತೆಗೆ ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದೆ.
ಅಂತರರಾಷ್ಟ್ರೀಯ ಪ್ಯಾರಾಲಿಂಪಿಕ್ ಸಮಿತಿಯಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆ, ಬೆಂಗಳೂರು ವತಿಯಿಂದ ವಿಶೇಷಚೇತನರಿಗಾಗಿ ಪ್ರತಿ ವರ್ಷ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳನ್ನು ಏರ್ಪಡಿಸಲಾಗುತ್ತದೆ.
ಡಿಸೆಂಬರ 2021ರಲ್ಲಿ ಏಶಿಯನ್ ಪ್ಯಾರಾ ಕ್ರೀಡೆಗಳು ಬೆಹರೆನನಲ್ಲಿ ನಡೆಯುವ ಸಂಭವವಿದೆ.ಕಲ್ಯಾಣ ಕರ್ನಾಟಕ ಭಾಗದ ದಿವ್ಯಾಂಗ ಯುವ ಕ್ರೀಡಾಪಟುಗಳು ಅಂಗವೈಕಲ್ಯತೆಯ ಕೀಳರಿಮೆ ಮರೆತು ಪ್ಯಾರಾ ಕ್ರೀಡೆಗಳಲ್ಲಿ ಉತ್ಸಾಹದಿಂದ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ಉತ್ತಮ ಸಾಧನೆಗೈದು ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರುವಂತ ಸುವರ್ಣಾವಕಾಶಗಳನ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಡಿಸೆಬಲ್ಡ ಹೆಲ್ಪಲೈನ್ ಪೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…