ಶಹಾಬಾದ: ಕೊವಿಡ್ನ ಇಂತಹ ಸಂಕಷ್ಟ ಸಮಯದಲ್ಲಿ ಆಕ್ಸಿಜನ್ ನೀಡುವ ಗಿಡ ಮರಗಳ ಮಹತ್ವ ಮನದಟ್ಟು ಮಾಡಿಸಿ ಮಾನವ ಕುಲಕ್ಕೆ ಕೊರೊನಾ ಹೊಸ ಪಾಠ ಕಲಿಸಿದೆ ಎಂದು ಶರಣ ಕೊತ್ತಲಪ್ಪ ಮುತ್ಯಾ ಹೇಳಿದರು.
ಅವರು ರವಿವಾರ ತೊನಸನಹಳ್ಳಿ(ಎಸ್) ಗ್ರಾಮದ ಶ್ರೀ ಶರಣ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೊರೊನಾ ವೈರಸ್ ಕಳೆದ ಒಂದುವರೆ ವರ್ಷದಿಂದ ಜಗತ್ತನ್ನೇ ಕಾಡುತ್ತಿದೆ.ಸಂಕ್ರಮಿತ ವ್ಯಕ್ತಿಗಳಿಗೆ ಉಸಿರಾಟದ ತೊಂದರೆಯಾದಾಗ ಆಕ್ಸಿಜನ್ ಸಿಲಿಂಡರ್ ಸಿಗದೇ ಪರದಾಡಿದಂತಹ ಪರಿಸ್ಥಿತಿ ನಾವೆಲ್ಲಾ ಕಂಡಿದ್ದೆವೆ.ಅಲ್ಲದೇ ಆಕ್ಸಿಜನ್ ಕೊರತೆಯಿಂದ ಸಾವಿರಾರು ಜನರು ಪ್ರಾಣವನ್ನು ಬಿಟ್ಟಿದ್ದಾರೆ.ಆದರೆ ನಮ್ಮ ಜೀವಿತಾ ಅವದಿಯ ಉದಕ್ಕೂ ಉಚಿತವಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿರುವ ಗಿಡಮರಗಳ ಮಹತ್ವ ಅರಿಯದ ಮೂಢ ಜನರಿಗೆ ಅರಿವು ಮೂಡಿದಂತಾಗಿದೆ.ಈಗಲಾದರೂ ಪ್ರತಿಯೊಬ್ಬರೂ ಕಡ್ಡಾಯವಾಗಿ ಒಂದಾದರೂ ಸಸಿಯನ್ನು ನೆಟ್ಟು ಪೋಷಿಸಬೇಕೆಂದು ಹೇಳಿದರು.
ಬಿಜೆಪಿ ಮುಖಂಡ ಬಸವರಾಜ ಮದ್ರಿಕಿ ಮಾತನಾಡಿ,ಅರಣ್ಯ ನಾಶದಿಂದ ಪರಿಸರದ ತಾಪಮಾನ ಹೆಚ್ಚಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಆದ್ದರಿಂದ ಈ ತಾಪಮಾನವನ್ನು ತಡೆಯಲು ಮರಗಳನ್ನು ಬೆಳೆಸಬೇಕೆಂದು ಹೇಳಿದರು.
ಗ್ರಾಮ ಪಂಚಾಯತ ಸದಸ್ಯ ಬೆಳ್ಳೆಪ್ಪ ಖಣದಾಳ, ಸಿದ್ದು ಸಜ್ಜನ್,ಸಿದ್ದನಗೌಡ ಭಮಶೆಟ್ಟಿ, ಸಿದ್ದು ಖಣದಾಳ, ಸಂಸ್ಥೆ ಕಾರ್ಯದರ್ಶಿ ರೇವಣಸಿದ್ಧಪ್ಪ ಕೇಲ್ಲೂರ್, ಪ್ರಕಾಶ್ ರೆಡ್ಡಿ, ಅಣವೀರ.ಎಸ್.ಗೋಳೇದ್, ಮಾಳಿಂಗರಾಯ ಕಂಟಿಕರ್, ಚನ್ನಬಸ್ಸು ಆಂದೇಲಿ,ಮಂಜುನಾಥ ಕೆಲ್ಲೂರ್, ವೀರೇಶ್ ಅಲ್ಲೂರ್ ಉಪಸ್ಥಿತರಿದ್ದರು.