ಕಲಬುರಗಿ: ಕರ್ನಾಟಕ ಸರ್ಕಾರ ಲೋಕಸೇವಾ ಆಯೋಗದ ಅಧ್ಯಕ್ಷರಾದ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಹಾಗೂ ವೀರಶೈವ ಮಹಾಸಭೆಯ ಯುವ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನಿಸಿ ಮಾತನಾಡಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಪಡೆದಿರುವ ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಒಂದು ಹಳ್ಳಿ ಯವರು ಇಂದು ಈ ಉನ್ನತ ಹುದ್ದೆಗೆ ಬಂದಿದ್ದು ಇಡೀ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಮ್ಮೆಯ ವಿಷಯವಶಂಕರಪ್ಪ ಸಾಹು ರವರು ಕಲ್ಯಾಣ ಕರ್ನಾಟಕ ಜನತೆಯ ಹಾಗೂ ಮುಖ್ಯಮಂತ್ರಿಗಳಾದ ಬಿಎಫ್ ಯಡಿಯೂರಪ್ಪಜಿ ಅವರ ಹೆಸರು ತರುವಂತ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ನಮಗಿದೆ ಲೋಕಸೇವಾ ಆಯೋಗದ ಇತಿಹಾಸದಲ್ಲಿ ನಂಬರ್1 ಅಧ್ಯಕ್ಷರಾಗಿ ಹೆಸರು ಗಳಿಸುತ್ತಾರೆ ಎಂಬ ನಂಬಿಕೆ ನಮಗಿದೆ ನಮ್ಮ ಭಾಗದವರು ವಿಶೇಷವಾಗಿ ಸಂಬಂಧಿಕರಾಗಿರುವ ಶಿವಶಂಕರಪ್ಪ ಸಾಹುಕಾರ ರವರಿಗೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ವತಿಯಿಂದ ವಿಶೇಷ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ಅಲ್ಲದೆ ಕಲ್ಯಾಣ ಕರ್ನಾಟಕ ಭಾಗದ ಮೇಲೆ ವಿಶೇಷ ಕಾಳಜಿ ವಹಿಸಿ ಕೆಲಸ ಮಾಡಿ ಎಂದು ಮನವಿ ಮಾಡಿದರು.ವೀರಶೈವ ಮಹಾಸಭೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಉದಯ ಪಾಟೀಲ್ ಮಾತನಾಡಿ ಶಿವಶಂಕರಪ್ಪ ಸಾಹುಕಾರರು ಕಲ್ಯಾಣ ಕರ್ನಾಟಕ ಪ್ರದೇಶದವರ ಅಷ್ಟೇ ಅಲ್ಲದೆ ಲಿಂಗಾಯತ ಸಮುದಾಯದ ವರಾಗಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಲಿಂಗಾಯತ ಸಮುದಾಯಕ್ಕೆ ಕೀರ್ತಿ ತರುವಂಥ ಕೆಲಸ ಸಾಹುಕಾರರು ಮಾಡುತ್ತಾರೆ ಎಂಬ ನಂಬಿಕೆ ನಮಗಿದೆ ಅವರಿಗೆ ಮಹಾಮಾರಿ ಕರೋನದ ಹಾವಳಿ ಮುಗಿದ ನಂತರ ಕಲ್ಬುರ್ಗಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಿ ಸನ್ಮಾನ ಸಮಾರಂಭ ಮಾಡಬೇಕೆಂಬುದು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಸ ಜ್ಯೋತಿ ಪ್ರತಿಷ್ಠಾನ ಅಧ್ಯಕ್ಷರಾದ ವಿಜಯಕುಮಾರ್ ಪಾಟೀಲ್ ತೆಗಲ್ತಿಪ್ಪಿ ಮಹಾಸಭೆಯ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರಾದ ಮಂಜುನಾಥ್ ಅಂಕಲಗಿ ತಾತಗೌಡ ಪಾಟೀಲ್ ಶರಣಗೌಡ ಪಾಟೀಲ್ ನರಿಬೋಳ ದೇವಿಂದ್ರ ಜವಳಿ ನರಿಬೋಳ ಮಲ್ಲಿಕಾರ್ಜುನ್ ಪಾಟೀಲ್ ಇದ್ದರು
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…