ಕಿತ್ತು ಹೋದ ರಸ್ತೆ ಪರಿಶೀಲಿಸಿದ ನಗರಸಭೆಯ ಅಧ್ಯಕ್ಷೆ ಪೌರಾಯುಕ್ತರ ತಂಡ

ಶಹಾಬಾದ: ನಗರದ ಬಸವೇಶ್ವರ ವೃತ್ತದಿಂದ ಶಾಸ್ತ್ರಿ ವೃತ್ತದವರೆಗಿನ ಡಾಂಬರೀಕರಣ ರಸ್ತೆ ಕಿತ್ತು ಹೋಗಿದ್ದರಿಂದ ಸಾರ್ವಜನಿಕರ ದೂರಿನ್ವಯ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ನೇತೃತ್ವದಲ್ಲಿ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಎಇಇ ಪುರುಷೋತ್ತಮ ಅವರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು.

ಕಾಮಗಾರಿ ಮಾಡಿ ಒಂದೇ ದಿನದಲ್ಲಿ ಡಾಂಬರೀಕರಣ ರಸ್ತೆ ಡಾಂಬರ ಕಿತ್ತು ಬರುತ್ತಿರುವುದರಿಂದ ಸಾರ್ವಜನಿಕರು ನಗರಸಭೆಯ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷರಿಗೆ ದೂರು ನೀಡಿದ್ದರು. ಈ ಕುರಿತು ಸೋಮವಾರ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಸಾಕಷ್ಟು ಸ್ಥಳದಲ್ಲಿ ಡಾಂಬರು ಕಿತ್ತುಕೊಂಡು ಬರುತ್ತಿದ್ದನ್ನು ಗಮನಿಸಿದರು.

ಬಾಲಕನೊಬ್ಬ ತನ್ನ ತಾಯಿಯ ಪ್ರಾಣ ಉಳಿಸಿಕೊಳ್ಳಲು: 25 ಸಾವಿರ ಸಹಾಯ

ಈ ಸಂದರ್ಭದಲ್ಲಿ ರಸ್ತೆಯ ಮೇಲೆ ಮಣ್ಣು ಹಾಗೂ ಧೂಳು ತೆಗೆಯದೇ ಡಾಂಬರೀಕರಣ ಮಾಡಿದ್ದಾರೆ.ರಸ್ತೆಯ ನಿರ್ಮಾಣ ಮಾಡಬೇಕಾದ ಯಾವುದೇ ನಿಯಮಾವಳಿ ಇಲ್ಲ.ಅವೈಜ್ಞಾನಿಕ ಕಾಮಗಾರಿ ಕೈಗೊಂಡಿದ್ದಾರೆ ಎಂದು ಸಾರ್ವಜನಿಕರು ದೂರಿನ ಸುರಿಮಳೆಗೈದರು. ಅಲ್ಲದೇ ಸರಿಯಾದ ಪ್ರಮಾಣದಲ್ಲಿ ಡಾಂಬರ ಹಾಕದಿರುವುದು ಕಂಡು ಬಂತು. ಜೆಇ ಬಸವರಾಜ ಅವರನ್ನು ಕಾಮಗಾರಿ ನಡೆಯುವಾಗ ಏನು ಮಾಡುತ್ತಿದ್ದಿರಿ.ಪರಿಶೀಲನೆ ಮಾಡುವುದು ನಿಮ್ಮ ಜವಾಬ್ದಾರಿ ಅಲ್ಲವೇ ಎಂದು ಪೌರಾಯುಕ್ತರು ಆಕ್ರೋಶಗೊಂಡರು.

ಡಾಂಬರೀಕರಣ ಮಾಡದಿರುವಂತೆ ಹೇಳಲಾಗಿದೆ.ಆದರೂ ಗುತ್ತಿಗೆದಾರ ಅಧಿಕಾರಿಗಳ ಮಾತಿಗೆ ಬೆಲೆ ಕೊಡದೇ ಹಾಗೂ ರವಿವಾರ ವಾರದ ರಜೆಯ ಸಮಯದಲ್ಲಿ ಯಾರು ಇರದ ಸಮಯದಲ್ಲಿ ಡಾಂಬರೀಕರಣ ಮಾಡಿದ್ದಾನೆ ಜೆಇ ಬಸವರಾಜ ತಿಳಿಸಿದರು.ಅಲ್ಲದೇ ಬಸವೇಶ್ವರ ವೃತ್ತದಿಂದ ಜೇವರ್ಗಿ ವೃತ್ತದ ವರೆಗಿನ ರಸ್ತೆ ಕಾಮಗಾರಿ ಇನ್ನೂ ನಡೆಯುತ್ತಿರುವಾಗಲೇ ರಸ್ತೆಯ ತುಂಬೆಲ್ಲಾ ತೆಗ್ಗುಗಳು ಬಿದ್ದಿರುವುದನ್ನು ಕಂಡರು.ತಕ್ಷಣವೇ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹಾಗೂ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಗುತ್ತಿಗೆದಾರನಿಗೆ ಕರೆ ಮಾಡಿ ಡಾಂಬರೀಕರಣ ಮಾಡಿದ ಒಂದೆ ದಿನದಲ್ಲಿ ಡಾಂಬರು ಕಿತ್ತು ಬರುತ್ತಿದೆ.ಅಲ್ಲದೇ ಡಾಂಬರೀಕರಣ ಮಾಡದಿರುವಂತೆ ಹೇಳಿದರೂ ಕಾಮಗಾರಿ ಏಕೆ ಮಾಡಿದೆ. ಕೂಡಲೇ ಮತ್ತೊಮ್ಮೆ ಕಾಮಗಾರಿ ಮಾಡಿ.ಗುಣಮಟ್ಟದ ಕಾಮಗಾರಿ ಮಾಡದೇ ಹೋದರೆ ಇಲ್ಲದಿದ್ದರೇ ಬಿಲ್ ತಡೆಹಿಡಿಯಲಾಗುವುದು. ಅಲ್ಲದೇ ಕಳಪೆ ಕಾಮಗಾರಿ ಮಾಡಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿದರು.

ವರ್ಲ್ಡ್ ಬುಕ್ ಆಫ್ ರಿಕಾರ್ಡ್ ಪ್ರಶಸ್ತಿ ಭಾಜನರಾದ ಧರ್ಮ ಗುರು ರಾಜರಾಜೇಶ್ವರಿ

ಅಲ್ಲದೇ ಬಸವೇಶ್ವರ ವೃತ್ತದಿಂದ ಶಾಸ್ತ್ರಿ ವೃತ್ತದವರೆಗಿನ ಡಾಂಬರೀಕರಣ ರಸ್ತೆ ಕಾಮಗಾರಿಯ ಬಿಲ್ ಮಾಡದಂತೆ ಜೆಇ ಬಸವರಾಜ ಅವರಿಗೆ ತಾಕೀತು ಮಾಡಿದರು. ಜೆಇ ಮೌಲಾಲಿ, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಸಭೆ ಸದಸ್ಯ ನಾಗರಾಜ ಕರಣಿಕ, ನಗರಸಭೆಯ ನಾಮನಿರ್ದೇಶಿತ ಸದಸ್ಯ ಶರಣು ವಸ್ತ್ರದ್ ಇತರರು ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

13 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

16 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

21 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

21 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

23 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420