ಶಹಾಬಾದ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ.) ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಅರಿವು ಮೂಡಿಸಿ ಸುಮಾರು ೧೫ ಜನರಿಗೆ ಕೋವಿಡ್-೧೯ ಲಸಿಕೆ ಹಾಕಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ತಾಪುರ ಕಾರ್ಮಿಕ ನಿರೀಕ್ಷರಾದ ಶಿವರಾಜ್ ಪಾಟೀಲ್ ಮಾತನಾಡಿ, ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಇದೊಂದು ಕೊರೊನಾ ವೈರಸ್ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿ ಲಸಿಕೆಯಾಗಿದೆ.ಇದರಿಂದ ಕೊರೊನಾ ತೀವ್ರತೆ ಕಡಿಮೆಯಾಗುತ್ತದೆ.ಆದ್ದರಿಂದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಕೊರೊನಾ ಮುಕ್ತ ನಗರ ಮಾಡಲು ಪಣತೊಡಬೇಕು.ಅಲ್ಲದೇ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನಿಮ್ಮ ಹಾಗೂ ಕುಟುಂಬದ ಸ್ವಾಸ್ಥ್ಯ ಕಾಪಾಡಲು ಬಹು ಮುಖ್ಯ ಪಾತ್ರ ವಹಿಸಿ ಎಂದು ಹೇಳಿದರು.
ಕಾರ್ಮಿಕ ಸಂಘದ ಶಹಬಾದ್ ತಾಲೂಕ ಸಮಿತಿಯ ಕಾರ್ಯದರ್ಶಿ ನಾಗರಾಜ್ , ಕಟ್ಟಡ ಕಾಂಇಕ ಸಂಘದ ನಾಗಪ್ಪ ರಾಯಚೂರಕರ್, ರಾಜು ಇಂಜನ್ ಫೈಲ್, ಶಿವಶರಣ, ನೀಲಕಂಠ, ಶ್ರೀನಿವಾಸ್, ಕೋಲಪ್ಪ, ನಾಗು ಮಡ್ಡಿ, ಶ್ರೀಮಂತ್ ಇತರರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…