ಸುರಪುರ: ನಗರದ ಪೊಲೀಸ್ ಠಾಣೆ ಹಿಂಬಾಗದಲ್ಲಿ ನೂತನವಾಗಿ ಆರಂಭಿಸಲಾಗಿರುವ ಡಿ.ಸಿ.ಸಿ ಬ್ಯಾಂಕ್ ಶಾಖೆಯ ಬಳಿಯಲ್ಲಿ ಸೋಮವಾರ ಬೆಳಿಗ್ಗೆ ಅನೇಕ ಜನ ಗ್ರಾಹಕರು ತಮ್ಮ ಬ್ಯಾಂಕ್ ವ್ಯವಹಾರಕ್ಕಾಗಿ ನಾಮುಂದು ತಾಮುಂದು ಎಂದು ಮುಗಿಬೀಳುವ ಮೂಲಕ ನೂಕು ನುಗ್ಗಲು ಉಂಟಾಗಿತ್ತು.
ಕಳೆದ ಅನೇಕ ದಿನಗಳಿಂದಲೂ ಈ ರೀತಿಯ ಜನಸಂದಣಿ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆರೋಪ ಕೇಳಿಬರುತ್ತಿದೆ.ಆದರೆ ಈ ವರೆಗೆ ಗ್ರಾಹಕರ ನಿಯಂತ್ರಣಕ್ಕಾಗಿ ಮತ್ತು ಕೊರೊನಾ ನಿಯಮಗಳ ಪಾಲನೆಗಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಬೇಸರದ ಮಾತುಗಳು ಕೂಡ ಕೇಳಿ ಬರುತ್ತಿವೆ.
ಬ್ಯಾಂಕ್ನ ಸಿಬ್ಬಂದಿಗಳು ಹೊರಗಡೆ ಇದ್ದು ಗ್ರಾಹಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಅನೇಕ ಜನ ಗ್ರಾಹಕರು ಮಾಸ್ಕ್ ಧರಿಸಿರುವುದಿಲ್ಲ,ಅಲ್ಲದೆ ಸಾಮಾಜಿಕ ಅಂತರವೂ ಇರುವುದಿಲ್ಲ ಹೀಗಾದಲ್ಲಿ ಕೊರೊನಾ ನಿರ್ಮೂಲನೆ ಹೇಗೆ ಸಾಧ್ಯ ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ.ಇನ್ನಾದರು ಪೊಲೀಸ್ ಇಲಾಖೆ ನಗರಸಭೆ ಕಂದಾಯ ಇಲಾಖೆ ಎಚ್ಚೆತ್ತುಕೊಂಡು ಒಬ್ಬರು ಪೊಲೀಸರನ್ನಾದರು ನೇಮಿಸುವ ಮೂಲಕ ನೂಕುನುಗ್ಗಲು ನಿಯಂತ್ರಣಗೊಳಿಸಬೇಕಿದೆ ಎಂದು ಜನರು ಒತ್ತಾಯಿಸುತ್ತಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…