ಕಲಬುರಗಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹತ್ವದ ನಿರ್ಣಯ ಕೈಗೊಂಡು ಜೀವ ಇರಲು ಕೊರೋನಾ ಲಸಿಕೆ, ಜೀವನ ಸಾಗಿಸಲು ಉಚಿತ ರೇಶನ್ , ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಘೋಷಣೆ ಮಾಡಿದ್ದು ಎಲ್ಲರಿಗೂ ಸಂತಸ ತಂದಿದೆ ಎಂದು ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಹಿರಿಯ ಮುಖಂಡ ಶ್ಯಾಮರಾವ್ ಪ್ಯಾಟಿ ಅವರು ಸ್ವಾಗತಿಸಿದ್ದಾರೆ.
“ಆತ್ಮ ನಿರ್ಭರ್ ಭಾರತ” ಅಡಿಯಲ್ಲಿ ಎಲ್ಲರೂ ಸ್ವಾಭಿಮಾನದ ಬದುಕು ನಡೆಸಲೂ ಸಹಾಯವಾಗುವುದು. ಕೊರೋನಾ ಎಷ್ಟು ದೊಡ್ಡ ಮಾನವೀಯ ಸಂಕಟವನ್ನು ನಿರ್ಮಿಸಿದೆ ಎಂಬುದನ್ನು ನಾವೆಲ್ಲರೂ ಮನಗಂಡಿದ್ದೇವೆ ಎಂದು ಅವರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಮುಂದಾದರು ಭಾರತ ದೇಶದ ಎಲ್ಲ ರಾಜಕೀಯ ಪಕ್ಷಗಳು ಕೋವಿಡ್-೧೯ ಬಗ್ಗೆ ಎಚ್ಚರವಹಿಸಿ ಭಾರತದಿಂದ ಕೊರೋನಾ ಓಡಿಸಲು ಸಂಕಲ್ಪ ಮಾಡಬೇಕು ಎಂದು ಪ್ಯಾಟಿ ಅವರು ನಿವೇದನೆ ಮಾಡಿದ್ದಾರೆ.
ದೇಶದಲ್ಲಿ ಯಾವುದೇ ಗರೀಬ್ ದೇಶವಾಸಿಗಳು ಹಸಿವಿನಿಂದ ವಂಚಿತರಾಗಬಾರದು ಎಂದು ಸಮಯಕ್ಕೆ ತಕ್ಕಂತೆ ಉಚಿತ ರೇಶನ್, ಉಚಿತ ಲಸಿಕೆ ಯೋಜನೆ ಎಲ್ಲ ದೇಶಾಭಿಮಾನಿಗಳಿಗೆ ಸಂತಸವುಂಟು ಮಾಡಿದೆ ಎಂದು ಶ್ಯಾಮರಾವ್ ಪ್ಯಾಟಿ ಅವರು ಶ್ಲಾಘಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…