ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಚೆನ್ನಬಸವ ಶಿವಾಚಾರ್ಯ ಸ್ವಾಮೀಜಿ

0
25

ಸುರಪುರ: ಕೊರೊನಾ ರೋಗಕ್ಕೆ ಯಾವುದೇ ಅಧಿಕೃತವಾದ ಔಷಧಿ ಇಲ್ಲವಾದರೂ ಎಲ್ಲರು ಮನೆಯಲ್ಲಿ ಉಳಿದುಕೊಳ್ಳುವ ಮೂಲಕ ಕೊರೊನಾವನ್ನು ಸೋಲಿಸಲು ಸಾಧ್ಯವಿದೆ ಎಂದು ಕೆಂಭಾವಿ ಗುರುಕಾಂತೇಶ್ವರ ಹಿರೇಮಠದ ಚೆನ್ನಬಸವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ನಗರದ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಎಲ್ಲರು ಕೊರೊನಾವನ್ನು ಸೋಲಿಸಲು ಕಠಿಬದ್ಧರಾಗಬೇಕಿದೆ.ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗು ಆಗಾಗ ಕೈಗಳನ್ನು ತೊಳೆಯುತ್ತಿರುವಂತೆ ಸಲಹೆ ನೀಡಿದರು ಅಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕೊರೊನಾ ಸೋಲಿಸೋಣ ಎಂದರು.

Contact Your\'s Advertisement; 9902492681

ನಂತರ ಆಸ್ಪತ್ರೆಯಲ್ಲಿನ ಎಲ್ಲಾ ರೋಗಿಗಳಿಗೆ ಹಣ್ಣು ಹಾಲು ಬ್ರೇಡ್ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರ ಅಭಿಮಾನಿಗಳು ಹಾಗು ಆಸ್ಪತ್ರೆಯ ಸಿಬ್ಬಂದಿಗಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here