” ವಿಶ್ವ ಪರಿಸರ ದಿನಾಚರಣೆ” ಪ್ರಯುಕ್ತ ಗಾಜಿಪುರ ಬಡಾವಣೆಯಲ್ಲಿ ಗಿಡ ನೆಡಲಾಯಿತು

ಕಲಬುರಗಿ: ನಾಡು-ನುಡಿ, ನೆಲ-ಜಲದ ಜೊತೆಗೆ ಇಂದಿನ ದಿನಮಾನದಲ್ಲಿ ಪರಿಸರ ಸ್ವಚ್ಛತೆಯೂ ಸೇರಿದಂತೆ ಆಮ್ಲಜನಕದ ಕೊರತೆ ನೀಗಿಸಲು ಗಿಡ ನೆಟ್ಟು ಅವುಗಳ ಪಾಲನೆಗೂ ಮುಂದಾಗಬೇಕು ಎಂದು ಮಹಾ ನಗರ ಪಾಲಿಕೆ ಮಾಜಿ ಸದಸ್ಯ ಗಣೇಶ ವಳಕೇರಿ ಅಭಿಪ್ರಾಯ ಪಟ್ಟರು.

ನಗರದ ಗಾಜಿಪುರ ಬಡಾವಣೆಯ ಮಹಾವೀರ ಚೌಕ್ ಸೇರಿದಂತೆ ಹಲವೆಡೆ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರೋನಾ ಎರಡನೇ ಅಲೆಯಲ್ಲಿ ಆಕ್ಸಿಜನ್ ಸಿಗದೇ ಪರದಾಡಿದ ಹಲವಾರು ಜನರು ಪರಿತಪಿಸಿದ್ದಾರೆ. ಸಾವು- ನೋವುಗಳೂ ಸಂಭವಿಸಿದ ಹೃದಯವಿದ್ರಾವಕ ಘಟನೆಗಳನ್ನು ಎಲ್ಲರೂ ಕಂಡಿದ್ದಾರೆ. ಮನೆಗೊಂದು ಮಗು, ಮಗುವಿಗೊಂದು ಮರ ಎಂಬ ಧ್ಯೇಯ ವಾಕ್ಯ ಎಲ್ಲ ಮನೆಗಳಿಗೂ ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ಎಚ್.ಶಿವರಾಮೇಗೌಡರ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಮಾತನಾಡಿ, ಹಸಿರೆ ಉಸಿರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೂ ಪ್ರಪಂಚದಾದ್ಯಂತ ಪರಿಸರವನ್ನು ನಾಶಮಾಡಿ ಕಾಂಕ್ರೀಟ್ ಹಾಸಿಗೆಯನ್ನು ಹಾಕುತ್ತಿರುವುದರಿಂದ,ನಾವು ಕೆಲವೇ ವರ್ಷಗಳಲ್ಲಿ ವಿನಾಶದ ಹಾದಿಯನ್ನು ತುಳಿಯುತ್ತಿದ್ದೇವೆ. ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ, ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಂದ ಪರಿಸರದಲ್ಲಿ ವಾಯುಮಾಲಿನ್ಯ, ಜಲಮಾಲಿನ್ಯ, ಭೂ ಮಾಲಿನ್ಯ, ಶಬ್ದ ಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕರಾದ ನಾಗರಾಜ ಸೊಲ್ಲಾಪುರ, ರಾಘವೇಂದ್ರ ಹೆಬ್ಬಾಳಕರ್, ದೀಪಕ ಹೊಡಲ್, ಸಂತೋಷ, ಶಂಕರ ನಾಟೀಕಾರ ಸೇರಿದಂತೆ ಇನ್ನಿತರರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

7 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

10 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

15 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

17 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420