ಜೇವರ್ಗಿ: ತಾಲೂಕಿನ ಹುಲ್ಲುರ ಊರಿನ ಭೀಮಾನದಿಯ ದಂಡೆಯ ಮೇಲೆ ಅಕ್ರಮವಾಗಿ ನೂರಾರು ಟಿಪ್ಪರ್ ಗಳ ಮೂಲಕ ಮರುಳನ್ನು ಹಗಲು-ರಾತ್ರಿಯೆನ್ನದೆ ಸಾಗಿಸುತ್ತಿದ್ದು ಸಂಪೂರ್ಣ ಭೀಮಾನದಿಯ ಒಡಲನ್ನು ಬರಿದು ಮಾಡುತ್ತಿದ್ದಾರೆ .ಹಾಗೂ ನೈಸರ್ಗಿಕ ಸಂಪತ್ತನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕ್ರಾಂತಿಕಾರಿ ಬಣ ಸಂಚಾಲಕರಾದ ಮಹೇಶ್ ಕೋಕಿಲೆ ತಹಸಿಲ್ದಾರರು ಜೇವರ್ಗಿ ಅವರಿಗೆ ಮನವರಿಕೆ ಮಾಡಿದರು.
ಈ ಕುರಿತಂತೆ ಮನವಿ ಪತ್ರವನ್ನು ಸಲ್ಲಿಸಿದರು .ಕೇವಲ ಬೆರಳಣಿಕೆಯಷ್ಟು ವಾಹನಗಳಿಗೆ ಮಾತ್ರ ರಾಯಲ್ಟಿ ಗಳನ್ನು ಪಡೆದು ಉಳಿದ ಟಿಪ್ಪರ್ ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಟಿಪ್ಪರ್ ಗಳಿಗೆ ,ಲಾರಿ ವಾಹನಗಳಿಗೆ ನಂಬರ್ ಪ್ಲೇಟ್ ಸಹ ಇರುವುದಿಲ್ಲ . ಈ ಕುರಿತಂತೆ ಯಾವುದೇ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿರುವುದಿಲ್ಲ ಎಂದು ತಿಳಿಸಿದರು.
ಇಲ್ಲಿನ ಹುಲ್ಲೂರು ಗ್ರಾಮದ ದಂಡೆಯ ಭೀಮಾನದಿಯ ಒಳಗಡೆ ರಸ್ತೆಯನ್ನು ನಿರ್ಮಿಸಿದ್ದು ಸಂಪೂರ್ಣವಾಗಿ ಮರಳು ಬರಿದಾಗಿದ್ದು, ಪಕ್ಕದ ರೈತರ ಜಮೀನಿನಲ್ಲಿ ಮರಳು ರಾಶಿ ಗುಡ್ಡೆ ಹಾಕಿದ್ದಾರೆ ,ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸಂಘಟನೆಯ ನೇತೃತ್ವದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಮನವಿ ಪತ್ರವನ್ನು ಸಲ್ಲಿಸುವಾಗ ಸುಭಾಷ ಆಲೂರ್ ,ಅಬ್ದುಲ್ ಘನಿ, ವಿಶ್ವರಾಧ್ಯ ಗೋಪಾಲಕರ ಸೇರಿದಂತೆ ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…