ಕಲಬುರಗಿ; ದಲಿತ ಕವಿ ಡಾ. ಸಿದ್ಧಲಿಂಗಯ್ಯ (೬೭) ಇಂದು ಸಂಜೆ ನಿಧನರಾಗಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾಗಿದ್ಸ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಸಂಜೆ ೫ ಗಂಟೆಗೆ ನಿಧನರಾದರು. ‘ಊರು ಕೇರಿ’ ಯ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸಿದ್ಧಲಿಂಗಯ್ಯ ಅವರು ವಿದ್ಯಾರ್ಥಿ ದೆಸೆಯಿಂದಲೇ ಹೋರಾಟಕ್ಕೆ ಇಳಿದಿದ್ದರು.
ಅವರು ದಲಿತ, ಜನಸಾಮಾನ್ಯ, ಕಾರ್ಮಿಕರ ಪರವಾಗಿ ಹೋರಾಟ ಮಾಡುತ್ತಿದ್ದರು. ಅವರ ಹೊಲೆ ಮಾದಿಗರ ಹಾಡಿನ ಮೂಲಕ ಸಂಚಲನ ಉಂಟು ಮಾಡಿತ್ತು.
ಶೋಕಃ ಡಾ. ಎಚ್.ಟಿ. ಪೋತೆ, ಮಹಿಪಾಲರೆಡ್ಡಿ ಮುನ್ನೂರ್, ಡಾ. ಶ್ರೀಶೈಲ ನಾಗರಾಳ, ಡಾ. ಶಿವರಂಜನ್ ಸತ್ಯಂಪೇಟೆ, ಪ್ರಭಾಕರ ಜೋಶಿ, ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.