ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರ ನೇತೃತ್ವದಲ್ಲಿ ೧೮ ವರ್ಷದ ಮೇಲ್ಪಟ್ಟ ಜಿಲ್ಲೆಯ ಸಾಹಿತಿಗಳು, ಕವಿ-ಕಲಾವಿದರಿಗಾಗಿ ಜೂನ್ ೧೪ ರ ಬೆಳಗ್ಗೆ ೧೦.೩೦ ಕ್ಕೆ ನಗರದ ಪತ್ರಿಕಾ ಭವನದಲ್ಲಿ ಕೋರೊನಾ ಲಸಿಕೆ ಕ್ಯಾಂಪ್ ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ತಿಳಿಸಿದ್ದಾರೆ.
ಸಾಹಿತಿಗಳು ತಮ್ಮ ಬರಹದ ಮೂಲಕ ಸಮಾಜದ ಚಿಕಿತ್ಸಕರೆನಿಸಿಕೊಂಡಿದ್ದಾರೆ. ಇಂಥ ಸಮಾಜದ ಜವಾಬ್ದಾರಿ ಸ್ಥಾನದಲ್ಲಿರುವ ಅವರಿಗೆ ಕೋವಿಡ್ ಲಸಿಕೆ ಕ್ಯಾಂಪ್ ಆಯೋಜಿಸಿ, ಇಡೀ ದೇಶವನ್ನೇ ಅಲ್ಲೋಲ-ಕಲ್ಲೋಲ ಮಾಡಿರುವ ಹೆಮ್ಮಾರಿ ಕೊರೊನಾ ವೈರಸ್ಗೆ ಲಸಿಕೆಯೇ ಮದ್ದಾಗಿದ್ದು, ಹಾಗಾಗಿ, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಭಾರತವನ್ನು ಕೋವಿಡ್-೧೯ ಮುಕ್ತವನ್ನಾಗಿ ಮಾಡೋಣ ಎಂದು ಅವರು ವಿವರಿಸಿದ್ದಾರೆ.
ಲಸಿಕೆ ಪಡೆಯಲಿಚ್ಚಿಸುವವರು ತಮ್ಮ ಆಧಾರ ಕಾರ್ಡ್ನ ನಕಲು ಪ್ರತಿಯೊಂದಿಗೆ ಸಂಘಟಕರಾದ ವಿಜಯಕುಮಾರ ತೇಗಲತಿಪ್ಪಿ-೯೮೮೦೩ ೪೯೦೨೫ – ಸುರೇಶ ಬಡಿಗೇರ-೯೯೪೫೫ ೭೦೨೩೪ ಗೆ ಸಂಪರ್ಕಿಸಲು ಅವರು ಪ್ರಕಟಣೆಯ ಮೂಲಕ ಕೋರಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…