ಹತ್ಯೆ ಪ್ರಕರಣ: ಅಮಾಯಕರ ಹೆಸರು ಕೈ ಬಿಡುವಂತೆ ಆಗ್ರಹ

0
29

ಕಲಬುರಗಿ: ಜೇವರ್ಗಿ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಹಣಮಂತ ಕೊಡಲಗಿ ಹತ್ಯೆ ಪ್ರಕರಣದಲ್ಲಿ ವಿನಾಕಾರಣ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಬಸವರಾಜ ಪಾಟೀಲ್ ಸೇರಿದಂತೆ ಇನ್ನು ಕೆಲ ಅಮಾಯಕರ ಹೆಸರನ್ನು ದಾಖಲಿಸಲಾಗಿರುವುದನ್ನು ಕೈ ಬಿಡುವಂತೆ ಆಗ್ರಹಿಸಿ ಕಲಬುರಗಿ ಜಿಲ್ಲಾ ವೀರೈಶವ ಸಮಾಜದ ಅಧ್ಯಕ್ಷ ಅರುಣಕುಮಾರ ಎಸ್.ಪಾಟೀಲ್ ಕೊಡಲಹಂಗರಗಾ ಅವರ ನೇತೃತ್ವದಲ್ಲಿ ಪೊಲೀಸ್ ಭವನದ ಎದುರುಗಡೆ ಪ್ರತಿಭಟನೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಶ್ರೀಶೈಲ್ ಘೂಳಿ, ಕಲ್ಯಾಣಪ್ಪ ಪಾಟೀಲ್ ಮಳಖೇಡ್, ಸುಭಾಷ ಬಿಜಾಪೂರೆ, ಸಾತಪ್ಪ ಪಟ್ಟಣಕರ್, ಶರಣಗೌಡ ಸಂಕನೂರ, ಸಂಗಮೇಶ ನಾಗನಹಳ್ಳಿ, ಶರಣು ಪಪ್ಪಾ, ಜಗನ್ನಾಥ ಪಟ್ಟಣಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here