ಬಿಸಿ ಬಿಸಿ ಸುದ್ದಿ

ತಪ್ಪದೇ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ : ಗುರಲಿಂಗಪ್ಪ

ಶಹಾಬಾದ ಕೊರೊನಾದಿಂದ ಜೀವ ಉಳಿಸಿಕೊಳ್ಳಲು ತಪ್ಪದೇ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.

ಅವರು ಶುಕ್ರವಾರ ನಗರಸಭೆಯ ಆವರಣದಲ್ಲಿ ಅಂಗವಿಕಲರಿಗೆ ಆಯೋಜಿಸಲಾದ ಲಸಿಕೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೋವಿಡ್ ಲಸಿಕೆ ಕುರಿತು ನಿರ್ಲಕ್ಷ ಸಲ್ಲ. ವದಂತಿಗಳಿಗೆ ಕಿವಿಗೊಡದೆ ಎಲ್ಲರೂ ಲಸಿಕೆ ಹಾಕಿಸಿಕೊಂಡು ರೋಗ ನಿರೋಧಕ ಶಕ್ತಿ ಪಡೆಯಬೇಕು. ಅಂಗವಿಕಲ ಹೊಂದಿದವರು ಮೊದಲು ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ಸದ್ಯ ಸರ್ಕಾರ ಅಂಗವಿಕಲರಿಗೆ ಕೋವಿಡ್ ಲಸಿಕೆ ಹಾಕಲು ಮುಂದಾಗಿದ್ದು , ಎಲ್ಲರೂ ಲಸಿಕೆ ತಪ್ಪದೇ ಹಾಕಿಸಿಕೊಳ್ಳಬೇಕು.ಅಲ್ಲದೇ ಇತರರಿಗೂ ತಿಳಿಸಬೇಕು.

ಬಿಜೆಪಿ ಸರ್ಕಾರದಿಂದ ಟ್ಯಾಕ್ಸ್ ಭಯೋತ್ಪಾದನೆ: ಯೂಥ್ ಕಾಂಗ್ರೆಸ್ ಹೋರಾಟ

ಇದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿ ಕೊರೊನಾ ವಿರುದ್ಧ ಹೋರಾಡುತ್ತದೆ. ಸ್ವಾವಲಂಬಿ, ಸ್ವಾಭಿಮಾನದ ಬದುಕು ಸಾಗಿಸಬೇಕೆಂಬ ನಿಮ್ಮ ಕನಸುಗಳಿಗೆ ನೂರೆಂಟು ವಿಘ್ನಗಳಿವೆ. ಅದಕ್ಕಾಗಿ ಸರ್ಕಾರ ನಿಮ್ಮ ನೆರವಿಗೆ ಅನೇಕ ಯೋಜನೆಗಳನ್ನು ಮಾಡಿದೆ. ಕೊರೊನಾ ಎಲ್ಲರಿಗೂ ಸಂಕ? ತಂದೊಡ್ಡಿದೆ. ಸರ್ಕಾರ ಅದನ್ನು ಸಮರ್ಥವಾಗಿ ಎದುರಿಸುತ್ತಿದೆ. ಯಾರು ಭಯಪಡುವ ಅಗತ್ಯವಿಲ್ಲ. ಮಾರ್ಗಸೂಚಿ ಪಾಲಿಸುವ ಕೆಲಸ ಮಾಡಿದರೆ ಸಾಕು ಎಂದು ಅವರು ಹೇಳಿದರು.

ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಮಾತನಾಡಿ, ಅಂಗವಿಕಲರನ್ನು ಪೋಷಿಸಿ, ಬೆಳೆಸುವುದು ಸರ್ಕಾರದ ಕೆಲಸವಾದರೂ, ಅವರನ್ನು ಮಾನವೀಯತೆ ದೃಷ್ಠಿಯಿಂದ ಕಾಣುವುದು ಪ್ರತಿಯೊಬ್ಬರ ಕರ್ತವ್ಯ. ಆದ್ದರಿಂದ ಅವರಿಗೆ ಲಸಿಕೆ ಹಾಕಿಸಿಕೊಳ್ಳಲು ಅರಿವು ಮೂಡಿಸಿ.ಅಲ್ಲದೇ ಅವರನ್ನು ಲಸಿಕೆ ಹಾಕಿಸಲು ಕರೆತನ್ನಿ ಎಂದು ಹೇಳಿದರು.

ನಗರಸಭೆಯ ಕಚೇರಿ ವ್ಯವಸ್ಥಾಪಕ ಶಂಕರ ಇಂಜಗನೇರಿ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ,ರಾಜೇಶ, ಶರಣು, ಹುಣೇಶ, ಅನೀಲ ಹೊನಗುಂಟಿಕರ್, ಈರಣ್ಣ ಕುರಿ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

18 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

20 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

23 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago