ಬಿಸಿ ಬಿಸಿ ಸುದ್ದಿ

ಆಶಾ ಕಾರ್ಯಕರ್ತರಿಗೆ ‘ಸ್ಟೀಮರ್ ಮಶಿನ್’ ವಿತರಣೆ

ಕಲಬುರಗಿ: ವಿಶ್ವಜ್ಯೋತಿ ಪ್ರತಿಷ್ಠಾನದ ೧೩ ನೇ ವರ್ಷಾಚರಣೆ ನಿಮಿತ್ತ ಕಿಲ್ಲರ್ ಕೊರೊನಾದ ಸಂಕಷ್ಟದ ಸಂದರ್ಭದಲ್ಲೂ ತಮ್ಮ ಜೀವದ ಹಂಗು ತೊರೆದು ಪ್ರಾಮಾಣಿಕ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತರಿಗೆ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಸಾರಥ್ಯದ ಕ್ರಿಯಾಶೀಲ ಗೆಳೆಯರ ಬಳಗದ ವತಿಯಿಂದ ಸ್ಠೀಮರ್ ಮಶಿನ್‌ಗಳನ್ನು ಕೊಡಲಾಯಿತು. ನಂತರ ಯೋಧರಂತೆ ಕೊರೊನಾದ ವಿರುದ್ಧ ಹೋರಾಟ ಮಾಡುತ್ತಿರುವ ವೈದ್ಯರು, ಪೌರ ಕಾರ್ಮಿಕರು, ಆರೋಗ್ಯ ಸಹಾಯಕರು,  ಪೊಲೀಸ್, ಅಗ್ನಿಶಾಮಕ ದಳ, ಶಿಕ್ಷಕ ಸೇರಿದಂತೆ ವಿವಿಧ ವೃತ್ತಿಗಳ ಪ್ರತಿನಿಧಿಗಳನ್ನು ಹೂ ಮಳೆ ಸುರಿಸುವ ಮೂಲಕ ವಿಶೇಷವಾಗಿ ಅಭಿನಂದನೆ ಸಲ್ಲಿಸಿದ ಅಪರೂಪದ ಕಾರ್ಯಕ್ರಮವೊಂದು ಶುಕ್ರವಾರ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿತು.

ನೇತೃತ್ವ ವಹಿಸಿದ್ದ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಕಣ್ಣಿಗೆ ಕಾಣದ ಕೊರೊನಾ ಎಂಬ ವೈರಿ ಮನುಕುಲಕ್ಕೆ ಸವಾಲೊಡ್ಡಿದೆ. ಇದಕ್ಕಾಗಿ ಹೆದರುವ ಅಗತ್ಯವಿಲ್ಲ. ನಮ್ಮ ಜೀವನ ಶೈಲಿ ಬದಲಾಯಿಸಿಕೊಂಡು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಸಾಕು ಈ ಕೊರೊನಾದಿಂದ ಪಾರಾಗಬಹುದು. ಆಶಾ ಕಾರ್ಯಕರ್ತರು, ಪೊಲೀಸ್, ಆರೋಗ್ಯ ಇಲಾಖೆ, ಪೌರ ಕಾರ್ಮಿಕರು, ಶಿಕ್ಷಕರು ಸೇರಿದಂತೆ ಅನೇಕ ಕೊರೊನಾ ಯೋಧರು ಕೊರೊನಾದ ಸಂದಿಗ್ಧ ಸಂದರ್ಭದಲ್ಲೂ ತಮ್ಮ ಕುಟುಂಬದ ಚಿಂತನೆ ಮಾಡದೇ ಇಡೀ ಸಮಾಜವೇ ನಮ್ಮ ಕುಟುಂಬ ಎಂದು ಭಾವಿಸಿ ಕಾರ್ಯನಿರ್ವಹಿಸುತ್ತಿರುವ ಈ ಕೊರೊನಾ ವಾರಿಯರ‍್ಸ್‌ಗಳ  ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ತಪ್ಪದೇ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ : ಗುರಲಿಂಗಪ್ಪ

ಸಾಹಿತ್ಯ ಪ್ರೇರಕರಾದ ಶರಣರಾಜ್ ಛಪ್ಪರಬಂದಿ, ಕಲ್ಯಾಣಕುಮಾರ ಶೀಲವಂತ ಮಾತನಾಡಿ, ಕೊರೊನ ಸೋಂಕಿನಿಂದ ಮುಕ್ತರಾಗಬೇಕಾದರೆ ಸ್ವಯಂ ಜಾಗೃತಿಯೊಂದೇ ದಾರಿ. ಹಾಗಾಗಿ, ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಶುಚಿತ್ವಕ್ಕೆ ಒತ್ತು ನೀಡುವಂಥ ಆರೋಗ್ಯಕರ ಜೀವನಶೈಲಿಯನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದರು.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವನಿಸಿಂಗ್ ಠಾಕೂರ, ಡಾ.ಬಾಬುರಾವ ಚವ್ಹಾಣ, ಪ್ರಮುಖರಾದ ಸಂದೇಶ ಕಮಕನೂರ, ರವೀಂದ್ರಕುಮಾರ ಭಂಟನಳ್ಳಿ, ಪ್ರಭುಲಿಂಗ ಮೂಲಗೆ, ಸುರೇಶ ಬಡಿಗೇರ, ಮಂಜುನಾಥ ಕಂಬಳಿಮಠ, ಜಗದೀಶ ಮರಪಳ್ಳಿ, ಅಶ್ವಿನಿ ಹಡಪದ, ಪೂರ್ಣಿಮಾ ಜಾನೆ, ವಿಶಾಲಾಕ್ಷಿ ದೇಸಾಯಿ, ಶಿವರಾಜ್ ಅಂಡಗಿ, ಎಸ್.ಎಂ.ಪಟ್ಟಣಕರ್, ಎಂ.ಎಸ್.ಪಾಟೀಲ ನರಿಬೋಳ, ಅರವಿಂದ ಗೋಟೂರ, ಪ್ರಸನ್ನ ವಾಂಜರಖೇಡೆ, ಡಾ.ಅನುಪಮಾ ಕೇಶ್ವಾರ, ರವಿಕುಮಾರ ಶಹಪುರಕರ್, ಶಿವಾನಂದ ಮಠಪತಿ, ಬಸವಪ್ರಬು, ಮುಡುಬಿ, ವಿದ್ಯಾಸಾಗರ ದೇಶಮುಖ, ಶರಣಬಸಪ್ಪ ನರೋಣಿ, ಪ್ರಭುದೇವ ಯಳವಂತಗಿ, ಪ್ರೊ.ಯಶ್ವಂತರಾಯ ಅಷ್ಟಗಿ, ರಾಜಕುಮಾರ ಕೋಟೆ, ಶ್ರೀಧರ ನಾಗನಹಳ್ಳಿ, ದಯಾನಂದ ಪಾಟೀಲ, ಸಂತೋಷ ಕುಡ್ಹಳ್ಳಿ, ಮನೋಹರ ಪೊದ್ದಾರ, ದೇವೇಂದ್ರಪ್ಪ ಗಣಮುಖಿ, ಪರಮೇಶ್ವರ ಶಟಕಾರ, ಬಿ.ಎಂ.ಪಾಟೀಲ ಕಲ್ಲೂರ, ಶ್ರೀಕಾಂತಗೌಡ ತಿಳಗೂಳ, ಮಾಲಾ ಕಣ್ಣಿ, ಮಾಲಾ ದಣ್ಣೂರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago