ಕಲಬುರಗಿ: ತಮ್ಮ ಕಾವ್ಯ,ಕವನ ಸಂಕಲನ ಮತ್ತು ವಿಮರ್ಶಾ ಕೃತಿಗಳ ಮೂಲಕ ಶೋಷಿತ ವರ್ಗಕ್ಕೆ ಸ್ವಾಭಿಮಾನದ ಕಿಚ್ಚು ಹಚ್ಚಿದಲ್ಲದೆ, ಸಮಾನತೆಗಾಗಿ ಹೋರಾಡಿದ ಮತ್ತು ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿದ ಮಹಾನ ಕವಿ ಡಾ.ಸಿದ್ದಲಿಂಗಯ್ಯ ನವರು ಎಂದು ಚಿಂತಕ ಪ್ರೊ.ಯಶವಂತರಾಯ್ ಅಷ್ಠಗಿ ಅಭಿಪ್ರಾಯ ಪಟ್ಟರು.
ಡಾ.ಸಿದ್ದಲಿಂಗಯ್ಯ ನವರ ನಿಧನದ ಹಿನ್ನೆಲೆಯಲ್ಲಿ ಕಲಬುರಗಿಯ ಸಾಂಸ್ಕೃತಿಕ ಸಂಘಟಕ-ಲೇಖಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಆಯೋಜಿಸಿದ್ದ ನುಡಿ-ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಪ್ರೊ.ಅಷ್ಠಗಿ, ಡಾ. ಸಿದ್ದಲಿಂಗಯ್ಯನವರ ಹೋಲೆಮಾದಿಗರ ಹಾಡು, ಕಪ್ಪು ಕಾಡಿನ ಹಾಡು, ಮೆರವಣಿಗೆ, ಹಕ್ಕಿ ನೋಟ ಮತ್ತು ಅವರ ಆತ್ಮ ಕಥೆ ಊರುಕೇರಿ ಅವರನ್ನು ಕವಿಯನ್ನು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಸ್ಥಾಯಿಯಾಗಿಸಿದೆ.
ಜೀವನದುದ್ದಕ್ಕು,ಕನ್ನಡ ಸಾಹಿತ್ಯ ಹಾಗೂ ದಲಿತ – ದಮನಿತರ ನೋವಿಗೆ ತಮ್ಮ ಹರಿತವಾದ ಲೇಖನಗಳಿಂದ ದನಿಯಾಗಿದ್ದ ಅವರು, ಜ್ಞಾನ ಪೀಠ ಪ್ರಶಸ್ತಿಗೆ ಅರ್ಹರಾಗಿದ್ದರೂ, ಪ್ರಶಸ್ತಿ ಲಭಿಸದಿರುವುದು ಕನ್ನಡ ಸಾಹಿತ್ಯ ಮತ್ತು ಶೋಷಿತ ವರ್ಗಗಳಿಗೆ ಆದ ಅನ್ಯಾಯ ಎಂದೆ ಭಾವಿಸಬಹುದಾಗಿದೆ ಎಂದು ಪ್ರೊ.ಯಶವಂತರಾಯ್ ಅಷ್ಠಗಿ ಅಭಿಪ್ರಾಯಿಸಿದರು.
ಈ ನುಡಿ-ನಮನ ಸಂದರ್ಭಲ್ಲಿ, ಸಾಂಸ್ಕೃತಿಕ ಸಂಘಟಕ-ಲೇಖಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕನ್ನಡ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ,ಸಂಶೋಧಕ-ಸಾಹಿತಿ ಮುಡಬಿ ಗುಂಡೆರಾವ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ, ಮಂಜುನಾಥ ಕಂಬಳಿಮಠ, ಸಂತೋಷ ಜವಳಿ, ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ದೇವೇಂದ್ರಪ್ಪ ಬಡಿಗೇರ,
ಸಂತೋಷ ಗುಡ್ಡಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…