ಪತ್ರಕರ್ತರಿಗೆ ಸ್ಟಿಮರ್ ಮಶೀನ್ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಿದ ಸುಣಗಾರ್

0
129

ಚಿತ್ತಾಪುರ:ಕರೋನಾದ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಪ್ರಾಮಾಣಿಕ ಸೇವೆ ಮಾಡುತ್ತಿರುವುದರ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಪತ್ರಕರ್ತರರಿಗೆ ಬಿಜೆಪಿ ಯುವ ಮೋರ್ಚಾ ತಾಲೂಕ ಅಧ್ಯಕ್ಷ ಶಿವಕುಮಾರ ಸುಣಗಾರ್ ಅವರು ವೈಯಕ್ತಿಕವಾಗಿ ಸ್ಟಿಮರ್ ಮಶೀನ್ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಣ್ಣಿಗೆ ಕಾಣದ ಕರೋನಾ ಎಂಬ ವೈರಿ ಮನುಕುಲಕ್ಕೆ ಸವಾಲೊಡ್ಡಿದೆ. ಇದಕ್ಕಾಗಿ ಹೆದರುವ ಅಗತ್ಯವಿಲ್ಲ. ನಮ್ಮ ಜೀವನ ಶೈಲಿ ಬದಲಾಯಿಸಿಕೊಂಡು,ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಸಾಕು ಕರೋನಾದಿಂದ ಪಾರಾಗಬಹುದು.ಕರೋನಾದ ಸಂದರ್ಭದಲ್ಲಿ ಮುಂಚೂಣಿಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರು ತಮ್ಮ ವೈಯಕ್ತಿಕ ಜೀವನವನ್ನು ಲೆಕ್ಕಿಸದೆ ಇಡೀ ಸಮಾಜವೇ ನಮ್ಮ ಕುಟುಂಬ ಎಂದು ಭಾವಿಸಿ ಕರೋನಾದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ ಈ ಕರೋನಾ ವಾರಿಯರ್ಸ್ ಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಹೇಶ ಬಟಗೇರಿ,ಚೌಡಪ್ಪಾ ಸುಣಗಾರ್, ಬಸವರಾಜ ಮದರ್ಕಿ ಇನ್ನಿತರರಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here