ಬಿಸಿ ಬಿಸಿ ಸುದ್ದಿ

ಡಾ. ಸಿದ್ಧಲಿಂಗಯ್ಯ ಜನರ ನೋವಿಗೆ ಸ್ಪಂದಿಸುವ ಕಾರ್ಯ ಮಾಡಿದ್ದಾರೆ: ಶಿವಕಾಂತ ಚಿಮ್ಮಾ

ಕಲಬುರಗಿ: ದಲಿತ ಧ್ವನಿ ಎಂದೇ ಪ್ರಸಿದ್ಧಿ ಪಡೆದಿದ್ದ ಡಾ. ಸಿದ್ಧಲಿಂಗಯ್ಯ ನವರು ಹಲವು ಹೋರಾಟ ಸಾಮಾಜಿಕ, ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು  ರಚಿಸಿ ಕಷ್ಟದಲ್ಲಿದ್ದ ಜನರ ನೋವಿಗೆ ಸ್ಪಂದಿಸುವ ಕಾರ್ಯ ಮಾಡಿದ್ದಾರೆ ಎಂದು ಚಿಂತಕರು, ಶಿಕ್ಷಕರಾದ  ಶಿವಕಾಂತ ಚಿಮ್ಮಾ ಹೇಳಿದರು.

ಸಂತೋಷ ನಗರದ ಕೆಎಚ್ ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ಅಖಿಲ ಭಾರತ ಯುವಜನ ಒಕ್ಕೂಟ ಎಐವೈಎಫ್  ಕಲಬುರ್ಗಿ ಜಿಲ್ಲಾ  ಸಮಿತಿ ವತಿಯಿಂದ ಹಮ್ಮಿಕೊಂಡ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಶ್ರೀಯುತರು ನಾಟಕ,     ಪ್ರಬಂಧ, ವಿಮರ್ಶೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡುವುದರೊಂದಿಗೆ ಮನುಷ್ಯರೆಲ್ಲರೂ ಒಂದೇ ಎಂಬ ಸಂದೇಶ ನೀಡಿದವರು.ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುವುದರೊಂದಿಗೆ ಬೇರೆಯವರಿಗೆ   ಮಾದರಿಯಾಗುವ ಕಾರ್ಯ ಮಾಡಿದ್ದಾರೆ.

ಹಲವಾರು ಕ್ರಾಂತಿ ಗೀತೆಗಳ ರಚಿಸಿ ಜನರ ಸಾಮಾಜಿಕ ನ್ಯಾಯಕ್ಕಾಗಿ ಕ್ರಾಂತಿಯ ಕಿಡಿ ಹಚ್ಚುವುದರೊಂದಿಗೆ ಸಮ ಸಮಾಜ  ನಿರ್ಮಾಣದ ಕನಸು ಹೊತ್ತಿ, ನೊಂದ ಜನತೆಯ ಧ್ವನಿಯಾಗಿದ್ದರು ಎಂದು ಹೇಳಿದರು. ನುಡಿ ನಮನ ಆಯೋಜಿಸಿದ ಸಂಘಟನೆ ಜಿಲ್ಲಾಧ್ಯಕ್ಷ ಹಣಮಂತರಾಯ ಎಸ್.ಅಟ್ಟೂರ  ಮಾತನಾಡುತ್ತಾ ಡಾ. ಸಿದ್ದಲಿಂಗಯ್ಯ ನವರು ಕೇವಲ ದಲಿತ ಕವಿಯಾಗದೇ ಮನುಷ್ಯ ಮನುಷ್ಯರನ್ನು ಒ೦ದು ಗೂಡಿಸುವ ಕಾರ್ಯ  ಮಾಡಿದ್ದಾರೆ.

ಅಲ್ಲದೆ ಹಲವಾರು ಕ್ರಾಂತಿಗೀತೆಗಳ ಮೂಲಕ ಬಡವರ, ನಿರ್ಗತಿಕರ,ದಲಿತರ,  ಕೂಲಿ-ಕಾರ್ಮಿಕರ, ರೈತರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಿ  ಆದರ್ಶ ವ್ಯಕ್ತಿಯಾಗಿ ಸರ್ವರೂ ನಮ್ಮವರೇ ಎನ್ನುವ ಶರಣರ  ವಿಚಾರಗಳೊಂದಿಗೆ ಜೀವನ ಸಾಗಿಸಿ ನಮ್ಮಂಥ ಯುವ ಜನತೆಗೆ ಒಬ್ಬ ಆದರ್ಶ ವ್ಯಕ್ತಿಯಾಗಿದ್ದಾರೆ ನೇರ ನಡೆ ನುಡಿಯಿ೦ದ ದಿಟ್ಟತನದ ಜೀವನ ಸಾಗಿಸಿದ್ದಾರೆ  ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿವಪ್ಪ ಕಟ್ಟಿಮನಿ ಸುಲ್ತಾನಪೂರ,  ವಿಜಯಕುಮಾರ ಬಿರಾದಾರ,  ರೇಖಾ ಬಿರಾದಾರ, ರೇವಣಸಿದ್ಧ ಚಿಮ್ಮಾ, ದಿಲೀಪ ಕುಮಾರ ಭಕರೆ, ನಂದೀಶ ಹೂಗಾರ ತಡಕಲ, ಸೈಯದ್ ಮಿನೋಲೢಾ, ಶರಣಕುಮಾರ ಕಲಕೇರಿ, ವಿಜಯಕುಮಾರ ಪಾಟೀಲ, ನಿರ್ಮಲಾ ಕಟ್ಟಿಮನಿ,  ಚಾವಿ೯ ಕಟ್ಟಿಮನಿ ಇತರರು ಭಾಗವಹಿಸಿದ್ದರು.

emedialine

Recent Posts

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

12 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

13 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

14 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

14 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago

ಮಜರ್ ಆಲಂ ಖಾನ್ ಅಧ್ಯಕತೆಯಲ್ಲಿ ನಗರದ ವಿನ್ಯಾಸ ಮಾಲೀಕರು, ಡೆವಲಪರ್ಸ್, ಬಿಲ್ಡರ್ಸ್ ಅವರೊಂದಿಗೆ ಸಭೆ

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…

15 hours ago