ಶಹಾಬಾದ: ಪೆಟ್ರೋಲ್ ಮತ್ತು ಡೀಸೆಲ್ ದರದ ನಿರಂತರ ಏರಿಕೆಯನ್ನು ಖಂಡಿಸಿ ಶನಿವಾರ ಕಾಂಗ್ರೆಸ್ ಪಕ್ಷವು ೧೦೦ ನಾಟ್ಔಟ್ ಹೆಸರಿನಲ್ಲಿ ಪೆಟ್ರೋಲ್ ಬಂಕ್ಗಳ ಮುಂದೆ ಪ್ರತಿಭಟನೆ ನಡೆಸಿ ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಘೋ?ಣೆಗಳನ್ನು ಕೂಗಿದರು.
ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಮಾತನಾಡಿ, ಕರೋನಾ ಲಾಕ್ ಡೌನ್ ನಿಂದಾಗಿ ದುಡಿಮೆ ಇಲ್ಲದೆ ಹೊತ್ತಿನ ಊಟಕ್ಕೇ ಜನಸಾಮಾನ್ಯರು ಅಂಗಾಲಾಚುವ ಭೀಕರ ಕ್ಷಾಮದ ಪರಿಸ್ಥಿತಿ ನಿರ್ಮಾಣವಾಗಿರುವಾಗ, ಉರಿವ ಗಾಯಕ್ಕೆ ಉಪ್ಪು ಸವರಿದಂತೆ ಕೇಂದ್ರ ಮತ್ತು ಬಿಜೆಪಿ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ೨೫೦-೩೦೦ ಪಟ್ಟು ತೆರಿಗೆ ಹಾಕಿ ಜನರನ್ನು ಸುಲಿಗೆ ಮಾಡುತ್ತಿದೆ. ಸಂಕ?ದ ಹೊತ್ತಲ್ಲಿ ತೆರಿಗೆ ಕಡಿತ, ಅಗತ್ಯ ವಸ್ತು ಬೆಲೆ ಇಳಿಕೆ, ಪರಿಹಾರ ಪ್ಯಾಕೇಜಿನಂತಹ ಕ್ರಮಗಳ ಮೂಲಕ ಜನರ ಬದುಕಿಗೆ ಆಸರೆಯಾಗಬೇಕಿದ್ದ ಸರ್ಕಾರ, ಅದಕ್ಕೆ ತದ್ವಿರುದ್ಧವಾಗಿ ಜನರ ಸಂಕ?ದ ಹೊತ್ತಲ್ಲೇ ನಿರಂತರ ಬೆಲೆ ಏರಿಕೆಯ ಮೂಲಕ ಸುಲಿಗೆ ಮಾಡುತ್ತಿದೆ. ಇದು ಅತ್ಯಂತ ಅಮಾನವೀಯ ಮತ್ತು ಜನಕಂಟಕ ಆಡಳಿತ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮಾತನಾಡಿ, ಕೋವಿಡ್ ಮಹಾಮಾರಿಯ ಪಿಡುಗಿನಿಂದ ಹೈರಾಣಾಗಿರುವ ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸಲ್ ಬೆಲೆ ಏರಿಸಿ ಗದಾ ಪ್ರಹಾರ ನಡೆಸಿದೆ. ಕಳೆದ ಒಂದು ತಿಂಗಳಿನಲ್ಲಿ ಬರೋಬ್ಬರಿ ೨೦ ಬಾರಿ ತೈಲೋತ್ಪನ್ನಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖಂಡರಾದ ಮೃತ್ಯುಂಜಯ್ ಹಿರೇಮಠ,ಗಿರೀಶ ಕಂಬಾನೂರ,ಸುರೇಶ ನಾಯಕ,ಇನಾಯತ ಖಾನ,ಹಾಷಮ ಖಾನ,ಶರಣಗೌಡ ಪಾಟೀಲ ಗೋಳಾ,ಕಿಶನ್ ನಾಯಕ, ಅನ್ವರ ಪಾಶಾ, ಕಿರಣ ಚವ್ಹಾಣ,ಕುಮಾರ ಚವ್ಹಾಣ,ಮ.ಜಾವೀದ್,ಮೆಹಬೂಬ ಅಪ್ಸರಾ, ಮೀರಾಜ ಸಾಹೇಬ,ನಾಗಣ್ಣ ರಾಂಪೂರೆ, ನಾಗರಾಜ ಕರಣಿಕ್,ತಿಪ್ಪಣ್ಣ ನಾಟೇಕಾರ, ಶಂಕರ ಕುಸಾಳೆ, ಸ್ನೇಹಲ್ ಜಾಯಿ,ಶ್ರವಣಕುಮಾರ, ಡಾ.ಜಹೀರ್,ಡಾ.ಅಹ್ಮದ್ ಪಟೇಲ್,ಶರಣು ಪಗಲಾಪೂರ,ಕಾಶಿನಾಥ ಜೋಗಿ, ಮಸ್ತಾನ, ಮರಲಿಂಗ, ಇಮ್ರಾನ, ಅಜರ್, ಮತೀನ್, ಪ್ರವೀಣ ರಾಜನ, ನಿಂಗಣ್ಣ ಸಂಗಾವಿಕರ್ ಸೇರಿದಂತೆ ಅನೇಕರು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…