ಬಿಸಿ ಬಿಸಿ ಸುದ್ದಿ

ಸುರಪುರ:ಸಾಮೂಹಿ ದಲಿತ ಸಂಘಟನೆಗಳಿಂದ ಕವಿ ಡಾ: ಸಿದ್ದಲಿಂಗಯ್ಯಗೆ ಶ್ರದ್ಧಾಂಜಲಿ

ಸುರಪುರ: ಸಾಮೂಹಿಕ ದಲಿತ ಸಂಘಟನೆಗಳಿಂದ ನಗರದ ಡಾ:ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಇತ್ತೀಚೆಗೆ ಅಗಲಿದ ದಲಿತ ಕವಿ ಡಾ:ಸಿದ್ದಲಿಂಗಯ್ಯ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು.ಆರಂಭದಲ್ಲಿ ಸಿದ್ದಲಿಂಗಯ್ಯನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೇಣದ ಬತ್ತಿ ಬೆಳಗಿ ಎರಡು ನಿಮಿಷಗಳ ಮೌನಾಚರಣೆಯನ್ನು ನಡೆಸಲಾಯಿತು.

ನಂತರ ಮುಖಂಡ ನಾಗಣ್ಣ ಕಲ್ಲದೇವನಹಳ್ಳಿ ಮಾತನಾಡಿ, ದಲಿತ ಕವಿಗಳೆಂದೆ ಹೆಸರಾಗಿದ್ದ ಕವಿ ಸಿದ್ದಲಿಂಗಯ್ಯನವರು ದಲಿತರ ಧ್ವನಿಯಾಗಿದ್ದರು.ಅವರು ಬರೆದ ಇಕ್ಕರ್ಲಾ ಒದಿರ್ಲಾ ಎನ್ನುವ ಹಾಡು ದಲಿತರ ಹೋರಾಟಕ್ಕೆ ಶಕ್ತಿಯನ್ನು ತುಂಬಿತ್ತು,ಅವರು ಇಡೀ ಬದುಕಿನುದ್ದಕ್ಕೂ ದಲಿತ ಶೋಷಿತರ ಏಳಿಗೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಇಂದು ನಮ್ಮನ್ನೆಲ್ಲ ಅಗಲಿರುವುದು ತುಂಬಾ ನೋವಿನ ಸಂಗತಿ,ಈ ಸಂದರ್ಭದಲ್ಲಿ ಅವರನ್ನು ನೆನೆಯುತ್ತಾ ಆತ್ಮಕ್ಕೆ ಶಾಂತಿ ಕೋರುವುದಾಗಿ ತಿಳಿಸಿದರು.

ಖ್ಯಾತ ಹಿಂದುಸ್ಥಾನಿ ಗಾಯಕಿ ನಿರ್ಮಲಾ ರಾಜಗುರುಗೆ ಕಸಾಪ ಅಧ್ಯಕ್ಷರ ಸನ್ಮಾನ

ಮತ್ತೋರ್ವ ಮುಖಂಡ ರಾಹುಲ್ ಹುಲಿಮನಿ ಮಾತನಾಡಿ,ಈ ನಾಡಿನ ಬಹುದೊಡ್ಡ ಸಾಹಿತಿಯಾಗಿದ್ದ ಡಾ: ಸಿದ್ದಲಿಂಗಯ್ಯ ಅವರನ್ನು ಎಲ್ಲರು ದಲಿತ ಕವಿ ಎಂದೇ ಕರೆಯುತ್ತಿದ್ದರು,ನಾಡಿನಲ್ಲಿಯ ದಲಿತ ಶೋಷಿತರ ಧ್ವನಿಯಾಗಿ ಅನೇಕ ಸಂಘಟನೆಗಳೊಂದಿಗೆ ಒಡನಾಟವಿದ್ದು ಬದುಕಿನುದ್ದಕ್ಕೂ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದವರು.ಅಲ್ಲದೆ ಅವರು ಬರೆದ ಹಾಡು ಯಾರಿಗೆ ಎಲ್ಲಿಗೆ ಬಂತು ೪೭ರ ಸ್ವಾತಂತ್ರ್ಯ ಎನ್ನುವಂತದ್ದು ಎಲ್ಲರಲ್ಲಿ ಹೋರಾಟದ ಕೆಚ್ಚನ್ನು ಮೂಡಿಸಿದೆ,ಅವರೊಬ್ಬ ಬಂಡಾಯ ದಲಿತ ಸಾಹಿತಿ ಮಾತ್ರವಲ್ಲದೆ ಪ್ರೇಮ ಕವಿಯು ಆಗಿದ್ದರು ಎನ್ನುವುದು ಅವರ ಅನೇಕ ಹಾಡುಗಳು ಚಲನಚಿತ್ರ ಗೀತೆಗಳಾಗಿರುವುದು ಸಾಕ್ಷಿಯಾಗಿದೆ.ಇಂತಹ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡು ದಲಿತ ಸಮುದಾಯಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ ಹೊಸ್ಮನಿ ಭೀಮರಾಯ ಸಿಂದಗೇರಿ ಮಾಳಪ್ಪ ಕಿರದಹಳ್ಳಿ ಪತ್ರಕರ್ತ ರಾಜು ಕುಂಬಾರ ರಾಜು ಕಟ್ಟಿಮನಿ ಚಂದಪ್ಪ ಪಂಚಮ್ ಶ್ರೀಮಂತ ಚಲುವಾದಿ ಜಗದೀಶ ಶಾಖನವರ ಗೌತಮ್ ತೇಲ್ಕರ್ ಗುರು ಹುಲಿಕಲ್ ಇತರರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

8 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

8 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

10 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

10 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago